ಸಭೆಯಲ್ಲಿ ಹಾಜರಿದ್ದ ಉಪವಿಭಾಗಾಧಿಕಾರಿ ಅರುಳ್ಕುಮಾರ್ ಮಾತನಾಡಿ, ಶಿವಮೊಗ್ಗ ಜಿಲ್ಲೆ ಕಲ್ಲು ಗಣಿಗಾರಿಕೆಯಲ್ಲಿ ಸ್ಪೋಟ ನಡೆದ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ಸುರಕ್ಷಿತ ಕುರಿತಂತೆ ಪೊಲೀಸ್,ಕಂದಾಯ ಅಧಿಕಾರಿಗಳ ತುರ್ತು ಸಭೆ ನಡೆಸಲಾಗಿದೆ. ಸದ್ಯದಲ್ಲೇ ಕಲ್ಲು ಗಣಿಗಾರಿಕೆ ಪರವಾನಗಿ ಪಡೆದಿರುವ ಮಾಲೀಕರ ಸಭೆ ನಡೆಸಲಾಗುವುದು. ಸ್ಫೋಟಕ ಬಳಸುವ, ಸಂಗ್ರಹಿಸುವ ಕುರಿತಂತೆ ಸರ್ಕಾರದ ಮಾರ್ಗದರ್ಶಿ ಮನವರಿಕೆ ಮಾಡಿಕೊಡಲಾಗುವುದು ಎಂದರು.