ವಿಜಯಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಸಿ.ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಕೆ.ಶಿವಪ್ಪ ಅವರು ನೇಮಕಾತಿ ಪತ್ರ ನೀಡಿದರು. ಕಸಾಪ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪುನೀತಾ ನಟರಾಜ್, ವಿ.ಎನ್.ಸೂರ್ಯಪ್ರಕಾಶ್,ಎಂ.ನಾರಾಯಣಸ್ವಾಮಿ, ವಿ.ವಿಶ್ವನಾಥ್, ಟೌನ್ ಕಸಾಪ ಅಧ್ಯಕ್ಷ ಜೆ.ಆರ್.ಮುನಿವೀರಣ್ಣ, ಕಾರ್ಯದರ್ಶಿ ಎನ್.ಸಿ.ಮುನಿವೆಂಕಟರಮಣಪ್ಪ ಇದ್ದರು.