ಗ್ರಾಮೀಣ ಭಾಗದಲ್ಲಿ ಸಾಹಿತ್ಯಾಭಿರುಚಿಯನ್ನು ಹೆಚ್ಚಿಸುವ, ಸಾಹಿತ್ಯದ ಬಗ್ಗೆ ಒಲವು ಹೊಂದಿರುವ ಪ್ರತಿಭೆಗಳನ್ನು ಹೊರತರುವ ಉದ್ದೇಶದಿಂದ ಇಲ್ಲಿ ಸಮ್ಮೇಳನ ನಡೆಸಲಾಗುತ್ತಿದೆ. ತ್ಯಾಮಗೊಂಡ್ಲು, ವನಕಲ್ಲು ಮಠದಲ್ಲಿ ಎರಡು ಸಮ್ಮೇಳನಗಳನ್ನು ನಡೆಸಿದ್ದು, ಶಿವಗಂಗೆಯಲ್ಲಿ ಮೂರನೇ ಸಮ್ಮೇಳನ ಮಾಡಲಾಗುತ್ತಿದೆ. ಇದಲ್ಲದೇ ತಾಲ್ಲೂಕು ಘಟಕದ ವತಿಯಿಂದ ನೆಲಮಂಗಲದಲ್ಲಿ ಪ್ರತಿಭಾ ಪುರಸ್ಕಾರ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.