ಡಿ.ಇಡಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿವಿಧ ಕ್ರೀಡಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಮಿತಿ ಸದಸ್ಯ ಡಾ.ಎಚ್.ಜಿ.ವಿಜಯಕುಮಾರ್, ಅರವಿಂದ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಲಕ್ಷ್ಮೀನರಸಿಂಹ, ಸಹ ಕಾರ್ಯದರ್ಶಿ ಕೆ.ಸಿ.ಸರಸ್ವತಮ್ಮ, ಖಜಾಂಚಿ ಡಿ.ಕೆ.ವೆಂಕಪ್ಪ, ನಿರ್ದೇಶಕರಾದ ಯಶೋಧರ, ಶೈಕ್ಷಣಿಕ ಸಲಹೆಗಾರ ಸಿ.ರಾಮಯ್ಯ ಭಾಗವಹಿಸಿದ್ದರು.