ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಂದು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ವ್ಯಕ್ತಿತ್ವ ವಿಕಸನಕ್ಕೆ ಪ್ರತಿಯೊಂದು ಕ್ಷೇತ್ರದ ಮಾಹಿತಿ ಪಡೆದುಕೊಳ್ಳಬೇಕು. ನಾಡಿನ ಸಂಸ್ಕೃತಿ, ಭಾಷೆ, ಕಲೆಯ ಬಗ್ಗೆ ಅರಿವು ಮೂಡಿಸಬೇಕು. ಭವಿಷ್ಯದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹೆಚ್ಚಿಸಿಕೊಂಡರೆ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸುಲಭವಾಗಲಿದೆ. ಪೋಷಕರು ಮಕ್ಕಳ ಮೇಲೆ ಶೇಕಡವಾರು ಅಂಕಗಳಿಕೆಗಾಗಿ ಒತ್ತಡ ಹೇರಬಾರದು’ ಎಂದು ಹೇಳಿದರು.