ಶಾಲಾ ಸಂಸ್ಥಾಪಕ ಗಿರಿಯಪ್ಪ ಮಾತನಾಡಿ ,ಗ್ರಾಮೀಣ ಮಕ್ಕಳ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ. ರೈತಾಪಿ ವರ್ಗದವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುತ್ತಿದ್ದಾರೆ. ನಗರದ ಮಕ್ಕಳಿಗೆ ಸಿಗುವ ಎಲ್ಲ ಸವಲತ್ತು ಹಳ್ಳಿ ಮಕ್ಕಳಿಗೂ ಸಿಗಬೇಕು ಎನ್ನುವ ಉದ್ದೇಶವಿದೆ. ಶಾಲೆಗೆ ನುರಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.