<p><strong>ಸೂಲಿಬೆಲೆ:</strong> ಪ್ರತಿಯೊಬ್ಬ ವಿದ್ಯಾರ್ಥಿಯೂ ವೈಜ್ಞಾನಿಕ ಚಿಂತನೆಯ ಮನೋಭಾವ ಬೆಳಸಿಕೊಂಡು ಸಾಗಿದಾಗ ಹೊಸ ಅವಿಷ್ಕಾರಗಳನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ ಎಂದು ಆಲಪ್ಪನಹಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಲೋಕೇಶ್ ಹೇಳಿದರು.</p>.<p>ಹೊಸಕೋಟೆ ತಾಲ್ಲೂಕಿನ ಆಲಪ್ಪನಹಳ್ಳಿ ಕ್ಲಸ್ಟರ್ ಮಟ್ಟದ ‘ಮಕ್ಕಳ ವಿಜ್ಞಾನ ಹಬ್ಬ 2019’ ಅನ್ನುಹಸಿಗಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಬ್ಬವನ್ನು ಶಾಲಾಭಿವೃದ್ಧಿ ಪದಾಧಿಕಾರಿಗಳು ಉದ್ಘಾಟಿಸಿದರು.</p>.<p>ವಿದ್ಯಾರ್ಥಿಗಳು ಕಲಿಕಾ ಸಾಮರ್ಥ್ಯವನ್ನು ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಹೊರಹೊಮ್ಮಿಸಲು ಪೂರಕವಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದರು.</p>.<p>ಕ್ಲಸ್ಟರ್ ವ್ಯಾಪ್ತಿಯ 7 ಸರ್ಕಾರಿ ಶಾಲೆಗಳಿಂದ 6, 7 ಮತ್ತು 8 ನೇ ತರಗತಿಯ ಒಟ್ಟು 160 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಹಾಗೂ ಸಮನ್ವಯಾಧಿಕಾರಿ ಲಲಿತಮ್ಮ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ರೇಖಾ, ಕರುಣಾ, ಉಮಾದೇವಿ, ಶಿವನಂದಾ, ವೆಂಕಟೇಶ್, ಅನ್ನಪೂರ್ಣ ವಿಜ್ಞಾನ ಹಬ್ಬದ ಉಸ್ತುವಾರಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ:</strong> ಪ್ರತಿಯೊಬ್ಬ ವಿದ್ಯಾರ್ಥಿಯೂ ವೈಜ್ಞಾನಿಕ ಚಿಂತನೆಯ ಮನೋಭಾವ ಬೆಳಸಿಕೊಂಡು ಸಾಗಿದಾಗ ಹೊಸ ಅವಿಷ್ಕಾರಗಳನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ ಎಂದು ಆಲಪ್ಪನಹಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಲೋಕೇಶ್ ಹೇಳಿದರು.</p>.<p>ಹೊಸಕೋಟೆ ತಾಲ್ಲೂಕಿನ ಆಲಪ್ಪನಹಳ್ಳಿ ಕ್ಲಸ್ಟರ್ ಮಟ್ಟದ ‘ಮಕ್ಕಳ ವಿಜ್ಞಾನ ಹಬ್ಬ 2019’ ಅನ್ನುಹಸಿಗಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಬ್ಬವನ್ನು ಶಾಲಾಭಿವೃದ್ಧಿ ಪದಾಧಿಕಾರಿಗಳು ಉದ್ಘಾಟಿಸಿದರು.</p>.<p>ವಿದ್ಯಾರ್ಥಿಗಳು ಕಲಿಕಾ ಸಾಮರ್ಥ್ಯವನ್ನು ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಹೊರಹೊಮ್ಮಿಸಲು ಪೂರಕವಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದರು.</p>.<p>ಕ್ಲಸ್ಟರ್ ವ್ಯಾಪ್ತಿಯ 7 ಸರ್ಕಾರಿ ಶಾಲೆಗಳಿಂದ 6, 7 ಮತ್ತು 8 ನೇ ತರಗತಿಯ ಒಟ್ಟು 160 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಹಾಗೂ ಸಮನ್ವಯಾಧಿಕಾರಿ ಲಲಿತಮ್ಮ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ರೇಖಾ, ಕರುಣಾ, ಉಮಾದೇವಿ, ಶಿವನಂದಾ, ವೆಂಕಟೇಶ್, ಅನ್ನಪೂರ್ಣ ವಿಜ್ಞಾನ ಹಬ್ಬದ ಉಸ್ತುವಾರಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>