<p><strong>ವಿಜಯಪುರ : </strong>ಕೇಂದ್ರ ಸರ್ಕಾರ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತವಾಗಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲದ ಸಿಲಿಂಡರ್ಗಳನ್ನು ವಿತರಣೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಗ್ರಾಮಾಂತರ ಪ್ರದೇಶಗಳಲ್ಲಿನ ಬಹುತೇಕ ಬಡಕುಟುಂಬಗಳು ಈ ಸೌಲಭ್ಯದಿಂದ ವಂಚಿತವಾಗಿವೆ ಎಂದು ಮುಖಂಡ ಎಸ್. ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಹಳ್ಳಿಗಳಲ್ಲಿ ಮಹಿಳೆಯರು ಇಂದಿಗೂ ಸೌದೆ ಸಂಗ್ರಹಣೆಗಾಗಿ ಅರಣ್ಯ ಪ್ರದೇಶಗಳು, ನೀಲಗಿರಿ ತೋಪುಗಳ ಕಡೆಗೆ ಹೋಗಿ ಸೌದೆ ಸಂಗ್ರಹಣೆ ಮಾಡಿಕೊಂಡು ಬಂದು ಅಡುಗೆ ತಯಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು.</p>.<p>ಪ್ರತಿಯೊಂದು ಕುಟುಂಬಕ್ಕೂ ಅಡುಗೆ ಸಿಲಿಂಡರ್ಗಳನ್ನು ವಿತರಣೆ ಮಾಡುವುದಾಗಿ ಸರ್ಕಾರ ಹೇಳಿದೆ. ಗ್ಯಾಸ್ ಏಜೆನ್ಸಿಗಳ ಮೂಲಕ ಪೂರೈಕೆ ಮಾಡುವ ಭರವಸೆ ನೀಡಿದ್ದರೂ ಹಳ್ಳಿಗಳಲ್ಲಿ ಉಜ್ವಲ ಯೋಜನೆಯಡಿಯಲ್ಲಿ ಹೇಗೆ ಅವುಗಳನ್ನು ಪಡೆದುಕೊಳ್ಳಬೇಕು ಎನ್ನುವುದು ಇದುವರೆಗೂ ತಿಳಿದಿಲ್ಲ ಎಂದರು.</p>.<p>ಹಳ್ಳಿಗಳಲ್ಲಿ ಮೊದಲೇ ಅಡುಗೆ ಅನಿಲ ಸಂಪರ್ಕ ಪಡೆದುಕೊಂಡಿರುವವರೂ ಎರಡು ಸಿಲಿಂಡರ್ಗಳು ಸಿಗುತ್ತವೆ ಎನ್ನುವ ಕಾರಣಕ್ಕಾಗಿ ಉಜ್ವಲ ಯೋಜನೆಯ ಮೂಲಕವೂ ಪಡೆದುಕೊಂಡಿದ್ದಾರೆ. ಕೆಲ ಕುಟುಂಬಗಳಿಗೆ ಇದುವರೆಗೂ ತಲುಪಿಲ್ಲ ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಉರುವಲು ಸಂಗ್ರಹಿಸಿ ತೆಗೆದುಕೊಂಡು ಹೋಗುತ್ತಿದ್ದ ಊರಿನ ಹೆಸರೇಳಲು ಇಚ್ಛಿಸದ ಮಹಿಳೆ ಲಕ್ಷ್ಮಮ್ಮ ಮಾತನಾಡಿ, ‘ಸಿಲಿಂಡರ್ಗಳು ಉಚಿತವಾಗಿ ಕೊಡ್ತಾರಂತೆ, ಅದಕ್ಕೆ 1 ಸಾವಿರ ರೂಪಾಯಿ ಕಟ್ಟಬೇಕಂತೆ, ನಾವು ಕೂಲಿ ಮಾಡೋರು, ಅಷ್ಟೊಂದು ದುಡ್ಡು ಎಲ್ಲಿಂದ ತರೋದು ಸ್ವಾಮಿ, ಸಿಲಿಂಡರ್ ಮುಗಿದೋದ್ರೆ ಮತ್ತೆ ತಗೋಬೇಕು ಅಂದ್ರೆ ₹ 800 ಕೊಡಬೇಕಂತೆ. ಅದಕ್ಕೆ ನಾವ್ಯಾರು ಗ್ಯಾಸ್ ಸಂಪರ್ಕ ತಗೊಂಡಿಲ್ಲ’ ಎಂದರು.</p>.<p>ಸ್ಥಳೀಯ ಯುವ ಮುಖಂಡ ಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಬಡವರ ಹೆಸರೇಳಿಕೊಂಡು ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಕೊಡುತ್ತಿದೆ. ಪುನಃ ಅದೇ ಬಡವರು ಸಿಲಿಂಡರ್ ಖರೀದಿ ಮಾಡಬೇಕಾದರೆ ₹ 800 ಖರ್ಚು ಮಾಡಬೇಕು ಎಂದರು.</p>.<p>ಇದರಿಂದ ಸಂಪರ್ಕ ಪಡೆದುಕೊಂಡಿರುವ ಎಷ್ಟೋ ಮಂದಿ ಬಡವರು ಸಿಲಿಂಡರ್ ಉಪಯೋಗ ಮಾಡುವುದನ್ನು ಬಿಟ್ಟು ಪುನಃ ಸೌದೆಗಾಗಿ ಹುಡುಕಾಡಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡಜನರ ಈ ಪರಿಸ್ಥಿತಿ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಕುರಿತು ಶಾಶ್ವತ ಪರಿಹಾರ ಸೂಚಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ : </strong>ಕೇಂದ್ರ ಸರ್ಕಾರ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತವಾಗಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲದ ಸಿಲಿಂಡರ್ಗಳನ್ನು ವಿತರಣೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಗ್ರಾಮಾಂತರ ಪ್ರದೇಶಗಳಲ್ಲಿನ ಬಹುತೇಕ ಬಡಕುಟುಂಬಗಳು ಈ ಸೌಲಭ್ಯದಿಂದ ವಂಚಿತವಾಗಿವೆ ಎಂದು ಮುಖಂಡ ಎಸ್. ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಹಳ್ಳಿಗಳಲ್ಲಿ ಮಹಿಳೆಯರು ಇಂದಿಗೂ ಸೌದೆ ಸಂಗ್ರಹಣೆಗಾಗಿ ಅರಣ್ಯ ಪ್ರದೇಶಗಳು, ನೀಲಗಿರಿ ತೋಪುಗಳ ಕಡೆಗೆ ಹೋಗಿ ಸೌದೆ ಸಂಗ್ರಹಣೆ ಮಾಡಿಕೊಂಡು ಬಂದು ಅಡುಗೆ ತಯಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು.</p>.<p>ಪ್ರತಿಯೊಂದು ಕುಟುಂಬಕ್ಕೂ ಅಡುಗೆ ಸಿಲಿಂಡರ್ಗಳನ್ನು ವಿತರಣೆ ಮಾಡುವುದಾಗಿ ಸರ್ಕಾರ ಹೇಳಿದೆ. ಗ್ಯಾಸ್ ಏಜೆನ್ಸಿಗಳ ಮೂಲಕ ಪೂರೈಕೆ ಮಾಡುವ ಭರವಸೆ ನೀಡಿದ್ದರೂ ಹಳ್ಳಿಗಳಲ್ಲಿ ಉಜ್ವಲ ಯೋಜನೆಯಡಿಯಲ್ಲಿ ಹೇಗೆ ಅವುಗಳನ್ನು ಪಡೆದುಕೊಳ್ಳಬೇಕು ಎನ್ನುವುದು ಇದುವರೆಗೂ ತಿಳಿದಿಲ್ಲ ಎಂದರು.</p>.<p>ಹಳ್ಳಿಗಳಲ್ಲಿ ಮೊದಲೇ ಅಡುಗೆ ಅನಿಲ ಸಂಪರ್ಕ ಪಡೆದುಕೊಂಡಿರುವವರೂ ಎರಡು ಸಿಲಿಂಡರ್ಗಳು ಸಿಗುತ್ತವೆ ಎನ್ನುವ ಕಾರಣಕ್ಕಾಗಿ ಉಜ್ವಲ ಯೋಜನೆಯ ಮೂಲಕವೂ ಪಡೆದುಕೊಂಡಿದ್ದಾರೆ. ಕೆಲ ಕುಟುಂಬಗಳಿಗೆ ಇದುವರೆಗೂ ತಲುಪಿಲ್ಲ ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಉರುವಲು ಸಂಗ್ರಹಿಸಿ ತೆಗೆದುಕೊಂಡು ಹೋಗುತ್ತಿದ್ದ ಊರಿನ ಹೆಸರೇಳಲು ಇಚ್ಛಿಸದ ಮಹಿಳೆ ಲಕ್ಷ್ಮಮ್ಮ ಮಾತನಾಡಿ, ‘ಸಿಲಿಂಡರ್ಗಳು ಉಚಿತವಾಗಿ ಕೊಡ್ತಾರಂತೆ, ಅದಕ್ಕೆ 1 ಸಾವಿರ ರೂಪಾಯಿ ಕಟ್ಟಬೇಕಂತೆ, ನಾವು ಕೂಲಿ ಮಾಡೋರು, ಅಷ್ಟೊಂದು ದುಡ್ಡು ಎಲ್ಲಿಂದ ತರೋದು ಸ್ವಾಮಿ, ಸಿಲಿಂಡರ್ ಮುಗಿದೋದ್ರೆ ಮತ್ತೆ ತಗೋಬೇಕು ಅಂದ್ರೆ ₹ 800 ಕೊಡಬೇಕಂತೆ. ಅದಕ್ಕೆ ನಾವ್ಯಾರು ಗ್ಯಾಸ್ ಸಂಪರ್ಕ ತಗೊಂಡಿಲ್ಲ’ ಎಂದರು.</p>.<p>ಸ್ಥಳೀಯ ಯುವ ಮುಖಂಡ ಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಬಡವರ ಹೆಸರೇಳಿಕೊಂಡು ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಕೊಡುತ್ತಿದೆ. ಪುನಃ ಅದೇ ಬಡವರು ಸಿಲಿಂಡರ್ ಖರೀದಿ ಮಾಡಬೇಕಾದರೆ ₹ 800 ಖರ್ಚು ಮಾಡಬೇಕು ಎಂದರು.</p>.<p>ಇದರಿಂದ ಸಂಪರ್ಕ ಪಡೆದುಕೊಂಡಿರುವ ಎಷ್ಟೋ ಮಂದಿ ಬಡವರು ಸಿಲಿಂಡರ್ ಉಪಯೋಗ ಮಾಡುವುದನ್ನು ಬಿಟ್ಟು ಪುನಃ ಸೌದೆಗಾಗಿ ಹುಡುಕಾಡಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡಜನರ ಈ ಪರಿಸ್ಥಿತಿ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಕುರಿತು ಶಾಶ್ವತ ಪರಿಹಾರ ಸೂಚಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>