ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿ ವರ್ಷ ಅಗಸ್ಟ್ 15ರಂದು ಮತ್ತು ಜ.26ರಂದು ಗಣರಾಜ್ಯೋತ್ಸವ ಪ್ರಯುಕ್ತ ಭದ್ರತೆಯಲ್ಲಿ ಹೆಚ್ಚಳ ಮಾಡುವುದು ಸಾಮಾನ್ಯ. ಅದೇ ರೀತಿ ಬಾಗಲೂರು, ಚಿಕ್ಕಜಾಲ, ದೇವನಹಳ್ಳಿ ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಪೊಲೀಸರ ಮತ್ತು ಕೇಂದ್ರದ ವಿವಿಧ ಪೊಲೀಸ್ ತುಕಡಿ ಸಿಬ್ಬಂದಿಗಳು ಭದ್ರತೆ ನಿಯೋಜನೆಯಲ್ಲಿದ್ದಾರೆ. ಮೂರು ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಾ ನಿಗಾ ವಹಿಸುತ್ತಿರುತ್ತಾರೆ ಎಂದು ಹೇಳಿದರು.