ಸಮಾರಂಭ ಉದ್ಘಾಟಿಸಿ ಮಾತನಾಡಿದ ಅಚಲ ಸದ್ಗುರು ಸಂಜೀವಾನಂದಾರ್ಯ ಸೇವಾಶ್ರಮದ ಮುಖ್ಯಸ್ಥ ಎನ್.ಪುಟ್ಟರಾಜು, ‘ಹಿರಿಯ ನಾಗರಿಕರು ತಮ್ಮ ವಿಶ್ರಾಂತ ಜೀವನದಲ್ಲಿ ಸಾಹಿತ್ಯ ಪ್ರಕಾರಗಳಾದ, ಕತೆ ಕಾದಂಬರಿಗಳನ್ನು ಓದುವುದರಿಂದ ಮನಸ್ಸು ಉಲ್ಲಾಸಗೊಳ್ಳುತ್ತದೆ. ಮಾನಸಿಕ ಆರೋಗ್ಯ ಸರಿಯಾಗಿದ್ದರೆ ದೈಹಿಕ ಆರೋಗ್ಯವು ಉತ್ತಮವಾಗಿರಲು ಸಾಧ್ಯ. ಹಿರಿಯ ನಾಗರಿಕರ ಪರವಾದ ಹಲವಾರು ಕಾನೂನುಗಳು ಇಂದು ಜಾರಿಗೆ ಬಂದಿರುವುದು ಸ್ವಾಗತಾರ್ಹ. ಯಾವುದೇ ಒಂದು ಸಮಾಜದಲ್ಲಿ ಕುಟುಂಬಗಳು ಎಲ್ಲಾ ರೀತಿಯಲ್ಲೂ ಸದೃಢವಾಗಿರಲು ಹಿರಿಯ ನಾಗರಿಕರ ಸಲಹೆ, ಅವರ ಅನುಭವಗಳನ್ನು ಪಡೆಯುವುದು ಮುಖ್ಯ. ಇದು ಕುಟುಂಬಕ್ಕಷ್ಟೇ ಅಲ್ಲದೆ ಸರ್ಕಾರದ ಆಡಳಿತಕ್ಕೂ ಸಹ ಅನ್ವಯವಾಗಲಿದೆ’ ಎಂದರು.