ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ‘ರಾಜಕೀಯಕ್ಕೆ ಧರ್ಮದ ಲೇಪನವಾಗಬಾರದು. ಇದು ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕಮ್ಯುನಿಸ್ಟ್ ಹೀಗೆ ಎಲ್ಲ ಪಕ್ಷಗಳಲ್ಲಿ ಎಲ್ಲ ಧರ್ಮಗಳ ಜನರೂ ಇದ್ದಾರೆ. ಮಠಾಧೀಶರು ಒಂದು ಧರ್ಮದ ಪರವಾಗಿ ನಿಲ್ಲಬಾರದು’ ಎಂದರು.