<p><strong>ದೇವನಹಳ್ಳಿ: </strong>‘ಧರ್ಮ ಬೇರೆ, ರಾಜಕೀಯವೇ ಬೇರೆ. ಎಲ್ಲ ರಾಜಕೀಯ ಪಕ್ಷಗಳಲ್ಲಿ ಎಲ್ಲ ಧರ್ಮೀಯರೂ ಇರುತ್ತಾರೆ. ಮಠಾಧೀಶರು ಈ ವಿಚಾರ ಅರ್ಥ ಮಾಡಿಕೊಳ್ಳಬೇಕು’ ಪರೋಕ್ಷವಾಗಿ ಮಠಾಧೀಶರು ರಾಜಕಾರಣಕ್ಕೆ ಪ್ರವೇಶಿಸಬಾರದು’ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ‘ರಾಜಕೀಯಕ್ಕೆ ಧರ್ಮದ ಲೇಪನವಾಗಬಾರದು. ಇದು ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕಮ್ಯುನಿಸ್ಟ್ ಹೀಗೆ ಎಲ್ಲ ಪಕ್ಷಗಳಲ್ಲಿ ಎಲ್ಲ ಧರ್ಮಗಳ ಜನರೂ ಇದ್ದಾರೆ. ಮಠಾಧೀಶರು ಒಂದು ಧರ್ಮದ ಪರವಾಗಿ ನಿಲ್ಲಬಾರದು’ ಎಂದರು.</p>.<p>‘ಬಿಜೆಪಿಯಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವ ವಿಚಾರ ಅವರಿಗೆ ಬಿಟ್ಟಿದ್ದು, ಬೇರೆ ಪಕ್ಷಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ. ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಅವರ ಬಳಿ ಭಿಕ್ಷೆ ಬೇಡೋಕೆ ಆಗಲ್ಲ. ಯಾರನ್ನು ತೆಗೆಯಬೇಕು. ಯಾರಿಗೆ ಕೊಡಬೇಕು, ಎನ್ನುವುದನ್ನು ಆ ಪಕ್ಷ ನಿರ್ಧರಿಸಲಿ, ರಾಜ್ಯದಲ್ಲಿನ ಜನರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ’ ಎಂದರು.</p>.<p>ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅತಿವೃಷ್ಟಿಯಾಗಿ ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರಿಗಾಗಿ ಏನು ಮಾಡಬೇಕು ಎನ್ನುವುದನ್ನು ಸರ್ಕಾರ ಚಿಂತನೆ ನಡೆಸಿ, ಅವರ ಕಷ್ಟಕ್ಕೆ ಸೂಕ್ತವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ಬೆಳೆ ನಷ್ಟ ಮಾಡಿಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತಹ ಕೆಲಸ ಮಾಡಬೇಕು ಎಂದುಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>‘ಧರ್ಮ ಬೇರೆ, ರಾಜಕೀಯವೇ ಬೇರೆ. ಎಲ್ಲ ರಾಜಕೀಯ ಪಕ್ಷಗಳಲ್ಲಿ ಎಲ್ಲ ಧರ್ಮೀಯರೂ ಇರುತ್ತಾರೆ. ಮಠಾಧೀಶರು ಈ ವಿಚಾರ ಅರ್ಥ ಮಾಡಿಕೊಳ್ಳಬೇಕು’ ಪರೋಕ್ಷವಾಗಿ ಮಠಾಧೀಶರು ರಾಜಕಾರಣಕ್ಕೆ ಪ್ರವೇಶಿಸಬಾರದು’ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ‘ರಾಜಕೀಯಕ್ಕೆ ಧರ್ಮದ ಲೇಪನವಾಗಬಾರದು. ಇದು ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕಮ್ಯುನಿಸ್ಟ್ ಹೀಗೆ ಎಲ್ಲ ಪಕ್ಷಗಳಲ್ಲಿ ಎಲ್ಲ ಧರ್ಮಗಳ ಜನರೂ ಇದ್ದಾರೆ. ಮಠಾಧೀಶರು ಒಂದು ಧರ್ಮದ ಪರವಾಗಿ ನಿಲ್ಲಬಾರದು’ ಎಂದರು.</p>.<p>‘ಬಿಜೆಪಿಯಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವ ವಿಚಾರ ಅವರಿಗೆ ಬಿಟ್ಟಿದ್ದು, ಬೇರೆ ಪಕ್ಷಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ. ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಅವರ ಬಳಿ ಭಿಕ್ಷೆ ಬೇಡೋಕೆ ಆಗಲ್ಲ. ಯಾರನ್ನು ತೆಗೆಯಬೇಕು. ಯಾರಿಗೆ ಕೊಡಬೇಕು, ಎನ್ನುವುದನ್ನು ಆ ಪಕ್ಷ ನಿರ್ಧರಿಸಲಿ, ರಾಜ್ಯದಲ್ಲಿನ ಜನರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ’ ಎಂದರು.</p>.<p>ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅತಿವೃಷ್ಟಿಯಾಗಿ ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರಿಗಾಗಿ ಏನು ಮಾಡಬೇಕು ಎನ್ನುವುದನ್ನು ಸರ್ಕಾರ ಚಿಂತನೆ ನಡೆಸಿ, ಅವರ ಕಷ್ಟಕ್ಕೆ ಸೂಕ್ತವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ಬೆಳೆ ನಷ್ಟ ಮಾಡಿಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತಹ ಕೆಲಸ ಮಾಡಬೇಕು ಎಂದುಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>