ಸರ್ಕಾರಿ ಉದ್ಯೋಗ ಅವಕಾಶ ಬಂದರೂಸಾಕಷ್ಟು ಮಂದಿ ವಿದ್ಯಾವಂತರು ಸ್ವಾವಲಂಬನೆಯ ಜೀವನ ನಡೆಸುವ ಉದ್ದೇಶದಿಂದ ಕೃಷಿಯನ್ನು ಆಯ್ದುಕೊಂಡಿದ್ದಾರೆ. ಹೈನುಗಾರಿಕೆ, ಕೃಷಿ, ರೇಷ್ಮೆ, ಹಣ್ಣು ತರಕಾರಿ ಬೆಳೆದು ಬದುಕು ಕಟ್ಟಿಕೊಂಡಿದ್ದಾರೆ.ಬೆಂಗಳೂರು ಮಹಾನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ರೈತರ ಮಕ್ಕಳು, ಈಗ ಮನೆಗೆ ವಾಪಸಾಗಿದ್ದಾರೆ. ಆದರೆ, ಈಗ ರೇಷ್ಮೆ ಉದ್ಯಮವೂ ತೆರೆಮರೆಗೆ ಸರಿಯುತ್ತಿರುವುದರಿಂದ ಮುಂದೇನು ಎನ್ನುವ ಚಿಂತೆ ಅವರಲ್ಲಿ ಆವರಿಸಿದೆ.