ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಜನ್ಮದಿನದ ಪ್ರಯುಕ್ತ ಸೇವೆ, ಸಮರ್ಪಣಾ ಕಾರ್ಯಕ್ರಮ

Last Updated 23 ಸೆಪ್ಟೆಂಬರ್ 2021, 3:59 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ನಗರದ ಹೊರವಲಯದ ದರ್ಗಾಜೋಗಿಹಳ್ಳಿಯಲ್ಲಿ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ ಪತ್ರಗಳನ್ನು ಬರೆದು ಸೇವೆ ಮತ್ತು ಸಮರ್ಪಣೆ ಪ್ರತಿಜ್ಞಾ ಸ್ವೀಕಾರ ಮಾಡಲಾಯಿತು.

ದೇಶ ಕಂಡ ಉತ್ತಮ ಪ್ರಧಾನಿ ನರೇಂದ್ರಮೋದಿ ಅವರಿಗೆ ಶುಭಾಶಯಗಳನ್ನು ಕೋರುವ ಮೂಲಕ ವಿವಿಧ ಸೇವಾ ಕಾರ್ಯಗಳನ್ನು ಮಾಡುವುದು ಅರ್ಥಪೂರ್ಣವಾಗಿದೆ ಎಂದು ಋಷಿಕುಮಾರಸ್ವಾಮೀಜಿ ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ,ಬಿ.ಜೆ.ಪಿ.ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಎಂ.ಕೆ.ವತ್ಸಲಾ,ಮುಖಂಡರಾದ ರಾಮಕಿಟ್ಟಿ, ಟಿ.ವಿ.ಲಕ್ಷೀನಾರಾಯಣ, ಕೆ.ಎಚ್.ವೆಂಕಟರಾಜು ಲೋಕೇಶ್, ಗಿರಿಜಾ, ಜೆ.ವೈ.ಮಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT