<p><strong>ಹೊಸಕೋಟೆ:</strong> ಕಳೆದ ಡಿಸೆಂಬರ್ ನಗರದ ವಿವಿಧ ದೇವಸ್ಥಾನಗಳಲ್ಲಿ ಹನುಮ ಜಯಂತಿಯಂದು ಪ್ರಸಾದ ಸೇವಿಸಿ 280ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆ ಸೇರಿದ ಪ್ರಕರಣ ನಗರದಲ್ಲಿ ತಲ್ಲಣ ಸೃಷ್ಟಿಸಿತ್ತು. ಆದರೆ ಈ ಘಟನೆ ನಡೆದ ಹತ್ತು ದಿನ ಕಳೆಯುತ್ತಿದ್ದರೂ, ಘಟನೆಗೆ ಕಾರಣ ತಿಳಿದು ಬಂದಿಲ್ಲ.</p>.<p>ಘಟನೆಗೆ ಸಂಬಂಧಿಸಿದಂತೆ ಅಸ್ವಸ್ಥರು ಸೇವಿಸಿದ್ದ ಪ್ರಸಾದ, ಮಲ ಮತ್ತು ವಾಂತಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಈವರೆಗೂ ಪರೀಕ್ಷೆಯ ವರದಿ ಬಾರದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಪ್ರಶ್ನಿಸಿದರೆ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಕೇಳಿ ಎನ್ನುತ್ತಿದ್ದಾರೆ. ಆದರೆ ಡಿಎಚ್ಒ ಇದುವರೆಗೆ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಇನ್ನೂ ತಾಲ್ಲೂಲು ಆರೋಗ್ಯಾಧಿಕಾರಿ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸುತ್ತಿದ್ದಾರೆ.</p>.<p>ವರದಿ ಬಂದಿದ್ದರೂ ಅದನ್ನು ಸಾರ್ವಜನಿಕರಿಗೆ ತಿಳಿಸದೆ, ಮುಚ್ಚಿಡಲಾಗುತ್ತಿದೆ ಎಂಬ ಆರೋಪವು ಜಿಲ್ಲಾ ಆರೋಗ್ಯ ಇಲಾಖೆ ಮೇಲೆ ಇದೆ. ಘಟನೆಯ ಕಾರಣವನ್ನು ಏಕೆ ನಿಗೂಢವಾಗಿ ಇರಿಸಲಾಗಿದೆ ಎಂಬ ಅನುಮಾನಗಳು ಸ್ಥಳೀಯರನ್ನು ಕಾಡುತ್ತಿದೆ.</p>.<p>ಘಟನೆ ನಡೆದು ಸುಮಾರು 10 ದಿನಗಳು ಕಳೆದರೂ ಪ್ರಯೋಗಾಲಯದ ವರದಿ ಇನ್ನೂ ದೊರೆತಿಲ್ಲ, ಅಥವಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದ್ದಾರೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ.</p>.<p><strong>ಅಧಿಕಾರಿಗಳ ಉದಾಸೀನ:</strong></p><p>ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವೃದ್ದೆ ಬೇರೆ ಕಾರಣಕ್ಕೆ ಮೃತಪಟ್ಟಿದ್ದಾರೆ. ಪ್ರಸಾದ ಸೇವನೆಯಿಂದ ಅಲ್ಲ. ಯಾರಿಗೂ ತೊಂದರೆಯಾಗದೆ ಘಟನೆ ಸುಖಾಂತ್ಯವಾಗಿದೆ. ಇದರ ಕುರಿತು ನಾವು ಮರೆತಿದ್ದೇವೆ ಎಂದು ಅಧಿಕಾಕಾರಿಗಳು ಹೇಳುತ್ತಿರುವುದು ಜನರಲ್ಲಿ ಅಸಮಾಧಾನ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಕಳೆದ ಡಿಸೆಂಬರ್ ನಗರದ ವಿವಿಧ ದೇವಸ್ಥಾನಗಳಲ್ಲಿ ಹನುಮ ಜಯಂತಿಯಂದು ಪ್ರಸಾದ ಸೇವಿಸಿ 280ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆ ಸೇರಿದ ಪ್ರಕರಣ ನಗರದಲ್ಲಿ ತಲ್ಲಣ ಸೃಷ್ಟಿಸಿತ್ತು. ಆದರೆ ಈ ಘಟನೆ ನಡೆದ ಹತ್ತು ದಿನ ಕಳೆಯುತ್ತಿದ್ದರೂ, ಘಟನೆಗೆ ಕಾರಣ ತಿಳಿದು ಬಂದಿಲ್ಲ.</p>.<p>ಘಟನೆಗೆ ಸಂಬಂಧಿಸಿದಂತೆ ಅಸ್ವಸ್ಥರು ಸೇವಿಸಿದ್ದ ಪ್ರಸಾದ, ಮಲ ಮತ್ತು ವಾಂತಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಈವರೆಗೂ ಪರೀಕ್ಷೆಯ ವರದಿ ಬಾರದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಪ್ರಶ್ನಿಸಿದರೆ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಕೇಳಿ ಎನ್ನುತ್ತಿದ್ದಾರೆ. ಆದರೆ ಡಿಎಚ್ಒ ಇದುವರೆಗೆ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಇನ್ನೂ ತಾಲ್ಲೂಲು ಆರೋಗ್ಯಾಧಿಕಾರಿ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸುತ್ತಿದ್ದಾರೆ.</p>.<p>ವರದಿ ಬಂದಿದ್ದರೂ ಅದನ್ನು ಸಾರ್ವಜನಿಕರಿಗೆ ತಿಳಿಸದೆ, ಮುಚ್ಚಿಡಲಾಗುತ್ತಿದೆ ಎಂಬ ಆರೋಪವು ಜಿಲ್ಲಾ ಆರೋಗ್ಯ ಇಲಾಖೆ ಮೇಲೆ ಇದೆ. ಘಟನೆಯ ಕಾರಣವನ್ನು ಏಕೆ ನಿಗೂಢವಾಗಿ ಇರಿಸಲಾಗಿದೆ ಎಂಬ ಅನುಮಾನಗಳು ಸ್ಥಳೀಯರನ್ನು ಕಾಡುತ್ತಿದೆ.</p>.<p>ಘಟನೆ ನಡೆದು ಸುಮಾರು 10 ದಿನಗಳು ಕಳೆದರೂ ಪ್ರಯೋಗಾಲಯದ ವರದಿ ಇನ್ನೂ ದೊರೆತಿಲ್ಲ, ಅಥವಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದ್ದಾರೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ.</p>.<p><strong>ಅಧಿಕಾರಿಗಳ ಉದಾಸೀನ:</strong></p><p>ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವೃದ್ದೆ ಬೇರೆ ಕಾರಣಕ್ಕೆ ಮೃತಪಟ್ಟಿದ್ದಾರೆ. ಪ್ರಸಾದ ಸೇವನೆಯಿಂದ ಅಲ್ಲ. ಯಾರಿಗೂ ತೊಂದರೆಯಾಗದೆ ಘಟನೆ ಸುಖಾಂತ್ಯವಾಗಿದೆ. ಇದರ ಕುರಿತು ನಾವು ಮರೆತಿದ್ದೇವೆ ಎಂದು ಅಧಿಕಾಕಾರಿಗಳು ಹೇಳುತ್ತಿರುವುದು ಜನರಲ್ಲಿ ಅಸಮಾಧಾನ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>