ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಲಿಗೆ ಯಂತ್ರ ವಿತರಣೆ

Last Updated 17 ಸೆಪ್ಟೆಂಬರ್ 2021, 4:07 IST
ಅಕ್ಷರ ಗಾತ್ರ

ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಟ್ರಸ್ಟ್ ಅಡಿ 2021-22ನೇ ಸಾಲಿನಲ್ಲಿ ಗಣಿ ಬಾಧಿತ, ಗಣಿ ಬಾಧಿತವಲ್ಲದ ಪ್ರದೇಶದ ಗ್ರಾಮಗಳಲ್ಲಿರುವ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸ್ವಯಂಉದ್ಯೋಗ ಕೈಗೊಳ್ಳಲು ಉಚಿತ ಹೊಲಿಗೆ ಯಂತ್ರ ನೀಡಲಾಗುತ್ತಿದೆ.

ಈ ಕಾರ್ಯಕ್ರಮದಡಿ ಸೌಲಭ್ಯ ಪಡೆಯಲು ಜಿಲ್ಲೆಯಾದ್ಯಂತ ವಿವಿಧ ಗ್ರಾಮಗಳಿಂದ ಸ್ವೀಕೃತ ಅರ್ಜಿ ಹಾಗೂ ದಾಖಲೆ ಪರಿಶೀಲಿಸಿ, ಆಯ್ಕೆಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಪ್ರಕಟಿಸಲಾಗಿದೆ.

ಆಯ್ಕೆಪಟ್ಟಿ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಲಿಖಿತವಾಗಿ ಸೆ. 22ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಠಡಿ ಸಂಖ್ಯೆ 203, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ –ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT