<p><strong>ಆನೇಕಲ್: </strong>ಪಟ್ಟಣದ ಸಂತೆಬೀದಿಯ ಓಂ ಆದಿಪರಾಶಕ್ತಿ ಪೀಠಂನಲ್ಲಿ ಶರನ್ನವರಾತ್ರಿ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.</p>.<p>ನವರಾತ್ರಿಯ ಒಂಭತ್ತು ದಿನಗಳ ಕಾಲ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ಮಹಿಳೆಯರು ದೇವಿಗೆ ಮಡಿಲಕ್ಕಿ ಸಮರ್ಪಿಸಿ ತಮ್ಮ ಭಕ್ತಿಭಾವ ಮೆರೆಯುತ್ತಿದ್ದಾರೆ. ಶುಕ್ರವಾರದಂದು ಭಕ್ತರ ದಂಡು ಹೆಚ್ಚಾಗಿತ್ತು. ಭಕ್ತರು ದೇವಿಗೆ ನಿಂಬೆ ಹಣ್ಣಿನ ದೀಪ ಬೆಳಗಿದರು.</p>.<p>ಸೆ.27ರಂದು ವೆಂಕಟರಮಣಸ್ವಾಮಿ, ಸೆ.28ರಂದು ಸಂತಾನಲಕ್ಷ್ಮೀ, ಸೆ.29 ಸರಸ್ವತಿ, ಸೆ.30 ತಿರುವೇರ್ ಕಾಡು ಕರುಮಾರಿಯಮ್ಮ, ಅ.1 ಮಹಿಷಾಸುರ ಮರ್ಧಿನಿ, ಅ.2 ಆದಿಪರಾಶಕ್ತಿ ಅಲಂಕಾರ ಮಾಡಲಾಗುವುದು ಎಂದು ದೇವಾಲಯ ಸಮಿತಿಯ ಓಂಶಕ್ತಿ ವರದರಾಜು ತಿಳಿಸಿದರು.</p>.<p>ನವರಾತ್ರಿ ಪ್ರತಿದಿನ ಬೆಳಗ್ಗೆ 7ಕ್ಕೆ ಅಮ್ಮನವರಿಗೆ ಕಲಶಾಭಿಷೇಕ ಮಾಡಲಾಗುತ್ತಿದೆ. ಓಂಶಕ್ತಿ ದೇವಿಯನ್ನು ನಂಬಿ ಪೂಜಿಸುವುದರಿಂದ ಎಲ್ಲರಿಗೂ ಒಳಿತಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ. ವಿಜಯದಶಮಿಯ ದಿನವಾದ ಮಂಗಳವಾರ ಶಕ್ತಿಪೀಠದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪಟ್ಟಣದ ಸಂತೆಬೀದಿಯ ಓಂ ಆದಿಪರಾಶಕ್ತಿ ಪೀಠಂನಲ್ಲಿ ಶರನ್ನವರಾತ್ರಿ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.</p>.<p>ನವರಾತ್ರಿಯ ಒಂಭತ್ತು ದಿನಗಳ ಕಾಲ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ಮಹಿಳೆಯರು ದೇವಿಗೆ ಮಡಿಲಕ್ಕಿ ಸಮರ್ಪಿಸಿ ತಮ್ಮ ಭಕ್ತಿಭಾವ ಮೆರೆಯುತ್ತಿದ್ದಾರೆ. ಶುಕ್ರವಾರದಂದು ಭಕ್ತರ ದಂಡು ಹೆಚ್ಚಾಗಿತ್ತು. ಭಕ್ತರು ದೇವಿಗೆ ನಿಂಬೆ ಹಣ್ಣಿನ ದೀಪ ಬೆಳಗಿದರು.</p>.<p>ಸೆ.27ರಂದು ವೆಂಕಟರಮಣಸ್ವಾಮಿ, ಸೆ.28ರಂದು ಸಂತಾನಲಕ್ಷ್ಮೀ, ಸೆ.29 ಸರಸ್ವತಿ, ಸೆ.30 ತಿರುವೇರ್ ಕಾಡು ಕರುಮಾರಿಯಮ್ಮ, ಅ.1 ಮಹಿಷಾಸುರ ಮರ್ಧಿನಿ, ಅ.2 ಆದಿಪರಾಶಕ್ತಿ ಅಲಂಕಾರ ಮಾಡಲಾಗುವುದು ಎಂದು ದೇವಾಲಯ ಸಮಿತಿಯ ಓಂಶಕ್ತಿ ವರದರಾಜು ತಿಳಿಸಿದರು.</p>.<p>ನವರಾತ್ರಿ ಪ್ರತಿದಿನ ಬೆಳಗ್ಗೆ 7ಕ್ಕೆ ಅಮ್ಮನವರಿಗೆ ಕಲಶಾಭಿಷೇಕ ಮಾಡಲಾಗುತ್ತಿದೆ. ಓಂಶಕ್ತಿ ದೇವಿಯನ್ನು ನಂಬಿ ಪೂಜಿಸುವುದರಿಂದ ಎಲ್ಲರಿಗೂ ಒಳಿತಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ. ವಿಜಯದಶಮಿಯ ದಿನವಾದ ಮಂಗಳವಾರ ಶಕ್ತಿಪೀಠದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>