‘ರಥಯಾತ್ರೆ ಮೂಲಕ ಸರ್ಕಾರದ ಹಣದಲ್ಲಿ ಬಿಜೆಪಿಯವರು ತಮ್ಮ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾವಚಿತ್ರ ಹಾಕಲಾಗಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಮತ್ತು ಸಿದ್ದರಾಮಯ್ಯ ಅವರ ಭಾವಚಿತ್ರ ಹಾಕಿಲ್ಲ. ಈ ಭಾಗದ ಸಂಸದ ಬಿ.ಎನ್. ಬಚ್ಚೇಗೌಡ ಅವರ ಭಾವಚಿತ್ರ ಕೂಡ ಕಾಣುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಕಾರ್ಯಕ್ರಮವನ್ನು ತಾವು ಉದ್ಘಾಟಿಸುವುದಿಲ್ಲ ಎಂದು ಪ್ರತಿಭಟಿಸಿದರು.