ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯಲ್ಲೂ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರಾಮಕೃಷ್ಣಾಪುರದಲ್ಲಿನ ಪ್ರಸನ್ನ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆಯಿತು. ಪಟ್ಟಣದ ಶನಿಮಹಾತ್ಮ ದೇವಾಲಯ, ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯ, ಬನ್ನೇರುಘಟ್ಟ ಚಂಪಕಧಾಮ ಸ್ವಾಮಿ ದೇವಾಲಯ, ಹೆಬ್ಬಗೋಡಿ ಅನಂತನಗರದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ, ಸರ್ಜಾಪುರ ಶ್ರೀರಾಮ ದೇವಾಲಯ, ಲಕ್ಷ್ಮೀಕುಂಟೆ ಆಂಜನೇಯ ಸ್ವಾಮಿ ದೇವಾಲಯ, ಸಬ್ಮಂಗಲ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.