<p><strong>ದೇವನಹಳ್ಳಿ:</strong> ಇಲ್ಲಿನ ವಿಹಾನ್ ಪಬ್ಲಿಕ್ ಶಾಲೆಯಲ್ಲಿ ನಡೆದ ಕುರುಬರ ಸಂಘದ ಜಿಲ್ಲಾ ನಿರ್ದೇಶಕರ ಸ್ಥಾನದ ಆಯ್ಕೆ ಚುನಾವಣೆಗೆ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.</p>.<p>ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಸಾಮಾನ್ಯ 2ಸ್ಥಾನ, 1ಮಹಿಳಾ ಮೀಸಲು ಸ್ಥಾನಕ್ಕೆ ಮತದಾನ ನಡೆಯಿತು. 2ಸಾಮಾನ್ಯ ಸ್ಥಾನಕ್ಕೆ 7ಮಂದಿ ಅಭ್ಯರ್ಥಿಗಳು,1ಮಹಿಳಾ ಮೀಸಲು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ವರ್ಧೆ ನಡೆಸಿದ್ದರು. ಒಟ್ಟು 9ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು.</p>.<p>ಆರು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕು ಮತದಾರರಿಗೆ ಒಂದೆ ಕಡೆ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.</p>.<p>ಕಂಬಳಿ ಖರೀದಿ ಜೋರು: ಚುನಾವಣೆ ಮುನ್ಸೂಚನೆ ಅರಿತಿದ್ದ ಕಂಬಳಿ ತಯಾರಕರು ದ್ವಿಚಕ್ರ ವಾಹನಗಳಲ್ಲಿ ಕಂಬಳಿ ಬಂಡಲ್ಗಳನ್ನು ತಂದು ಮಾರಾಟ ಮಾಡಿದರು.</p>.<p>ಬಿರಿಯಾನಿಗೆ ಮುಗಿಬಿದ್ದ ಮತದಾರರು: ಮತದಾರರನ್ನು ಓಲೈಸಲು ಕೆಲ ಅಭ್ಯರ್ಥಿಗಳು ಬಿರಿಯಾನಿ ವ್ಯವಸ್ಥೆ ಮಾಡಿದ್ದರು. ಮತ್ತೊಂದು ಕಡೆ ಪ್ಯಾಕ್ ಮಾಡಿದ ಬಿರಿಯಾನಿ ವಿತರಿಸಲಾಯಿತು. ಯಾವುದೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗಿಂತ ಕಡಿಮೆ ಇಲ್ಲದಂತೆ ಚುನಾವಣೆ ನಡೆಯಿತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಇಲ್ಲಿನ ವಿಹಾನ್ ಪಬ್ಲಿಕ್ ಶಾಲೆಯಲ್ಲಿ ನಡೆದ ಕುರುಬರ ಸಂಘದ ಜಿಲ್ಲಾ ನಿರ್ದೇಶಕರ ಸ್ಥಾನದ ಆಯ್ಕೆ ಚುನಾವಣೆಗೆ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.</p>.<p>ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಸಾಮಾನ್ಯ 2ಸ್ಥಾನ, 1ಮಹಿಳಾ ಮೀಸಲು ಸ್ಥಾನಕ್ಕೆ ಮತದಾನ ನಡೆಯಿತು. 2ಸಾಮಾನ್ಯ ಸ್ಥಾನಕ್ಕೆ 7ಮಂದಿ ಅಭ್ಯರ್ಥಿಗಳು,1ಮಹಿಳಾ ಮೀಸಲು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ವರ್ಧೆ ನಡೆಸಿದ್ದರು. ಒಟ್ಟು 9ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು.</p>.<p>ಆರು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕು ಮತದಾರರಿಗೆ ಒಂದೆ ಕಡೆ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.</p>.<p>ಕಂಬಳಿ ಖರೀದಿ ಜೋರು: ಚುನಾವಣೆ ಮುನ್ಸೂಚನೆ ಅರಿತಿದ್ದ ಕಂಬಳಿ ತಯಾರಕರು ದ್ವಿಚಕ್ರ ವಾಹನಗಳಲ್ಲಿ ಕಂಬಳಿ ಬಂಡಲ್ಗಳನ್ನು ತಂದು ಮಾರಾಟ ಮಾಡಿದರು.</p>.<p>ಬಿರಿಯಾನಿಗೆ ಮುಗಿಬಿದ್ದ ಮತದಾರರು: ಮತದಾರರನ್ನು ಓಲೈಸಲು ಕೆಲ ಅಭ್ಯರ್ಥಿಗಳು ಬಿರಿಯಾನಿ ವ್ಯವಸ್ಥೆ ಮಾಡಿದ್ದರು. ಮತ್ತೊಂದು ಕಡೆ ಪ್ಯಾಕ್ ಮಾಡಿದ ಬಿರಿಯಾನಿ ವಿತರಿಸಲಾಯಿತು. ಯಾವುದೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗಿಂತ ಕಡಿಮೆ ಇಲ್ಲದಂತೆ ಚುನಾವಣೆ ನಡೆಯಿತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>