<p><strong>ಹೊಸಕೋಟೆ: </strong>ಅಗಸನಕೆರೆ ಒತ್ತುವರಿ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾಧಿಕಾರಿ ರವೀಂದ್ರ ನೇತೃತ್ವದ ತಂಡ ವರದಾಪುರ ಹಾಗೂ ನಗರದ ಸಾರ್ವಜನಿಕ ಆಸ್ಪತ್ರೆ ಹಿಂಭಾಗದಲ್ಲಿ ಪರಿಶೀಲನೆ ನಡೆಸಿತು.</p>.<p>ಕೆರೆ ಮತ್ತು ಸರ್ಕಾರಿ ಜಾಗವನ್ನು ತಕ್ಷಣ ಸರ್ವೆ ಮಾಡಿಸಬೇಕು. ಖಾಲಿ ಇರುವ ಜಾಗದಲ್ಲಿ ಬೇಲಿ ಹಾಕಿಸಬೇಕೆಂದು ತಹಶೀಲ್ದಾರ್ ಗೀತಾ ಅವರಿಗೆ ಸೂಚಿಸಿದರು. ಪ್ರತಿನಿತ್ಯ ಈ ಪ್ರದೇಶದಲ್ಲಿ ಪರಿಶೀಲಿಸಿ ಯಾವುದೇ ಹೊಸ ಒತ್ತುವರಿ ಆಗದಂತೆ ಗಮನಿಸುವಂತೆ ನಗರಸಭೆ ಆಯುಕ್ತ ನಿಸಾರ್ ಆಹಮದ್ ಅವರಿಗೆ ಸೂಚಿಸಿದರು.</p>.<p>ಮುಂದಿನ 15 ದಿನಗಳಲ್ಲಿ ಸರ್ವೆ ಕಾರ್ಯ ಮುಗಿಸಿ ಅತಿಕ್ರಮಣ ಮಾಡಿರುವವರಿಗೆ ನೋಟಿಸ್ ನೀಡುವುದಾಗಿ ತಹಶೋಲ್ದಾರ್ ಗೀತಾ ತಿಳಿಸಿದರು. ಸಿಇಒ ಸಯದ್ ಜಾವೀದ್, ಕಂದಾಯ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್, ಜನಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವರದಾಪುರ ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಅಗಸನಕೆರೆ ಒತ್ತುವರಿ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾಧಿಕಾರಿ ರವೀಂದ್ರ ನೇತೃತ್ವದ ತಂಡ ವರದಾಪುರ ಹಾಗೂ ನಗರದ ಸಾರ್ವಜನಿಕ ಆಸ್ಪತ್ರೆ ಹಿಂಭಾಗದಲ್ಲಿ ಪರಿಶೀಲನೆ ನಡೆಸಿತು.</p>.<p>ಕೆರೆ ಮತ್ತು ಸರ್ಕಾರಿ ಜಾಗವನ್ನು ತಕ್ಷಣ ಸರ್ವೆ ಮಾಡಿಸಬೇಕು. ಖಾಲಿ ಇರುವ ಜಾಗದಲ್ಲಿ ಬೇಲಿ ಹಾಕಿಸಬೇಕೆಂದು ತಹಶೀಲ್ದಾರ್ ಗೀತಾ ಅವರಿಗೆ ಸೂಚಿಸಿದರು. ಪ್ರತಿನಿತ್ಯ ಈ ಪ್ರದೇಶದಲ್ಲಿ ಪರಿಶೀಲಿಸಿ ಯಾವುದೇ ಹೊಸ ಒತ್ತುವರಿ ಆಗದಂತೆ ಗಮನಿಸುವಂತೆ ನಗರಸಭೆ ಆಯುಕ್ತ ನಿಸಾರ್ ಆಹಮದ್ ಅವರಿಗೆ ಸೂಚಿಸಿದರು.</p>.<p>ಮುಂದಿನ 15 ದಿನಗಳಲ್ಲಿ ಸರ್ವೆ ಕಾರ್ಯ ಮುಗಿಸಿ ಅತಿಕ್ರಮಣ ಮಾಡಿರುವವರಿಗೆ ನೋಟಿಸ್ ನೀಡುವುದಾಗಿ ತಹಶೋಲ್ದಾರ್ ಗೀತಾ ತಿಳಿಸಿದರು. ಸಿಇಒ ಸಯದ್ ಜಾವೀದ್, ಕಂದಾಯ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್, ಜನಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವರದಾಪುರ ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>