<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕ ಆರ್.ಆಂಜನೇಯ ಅವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷವನ್ನು ಸಿಂಪಡಿಸಿದ್ದರಿಂದಾಗಿ ರೇಷ್ಮೆ ಹುಳುಗಳು ಸಾವಿಗೀಡಾಗಿವೆ.</p>.<p>ಹಣ್ಣಾದ ಹಂತದಲ್ಲಿದ್ದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟಾರೆ 300 ಮೊಟ್ಟೆಗಳ ಹುಳುಗಳು ಸತ್ತಿರುವುದರಿಂದ ರೈತರಿಗೆ ಸುಮಾರು ₹2.5 ಲಕ್ಷ ನಷ್ಟವಾಗಿದೆ. ನಾಲ್ಕು ಎಕರೆ ಹಿಪ್ಪುನೇರಳೆ ತೋಟದಲ್ಲಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ಶನಿವಾರ ವಿಷ ಸಿಂಪಡಿಸಿದ್ದು, ಆ ಸೊಪ್ಪನ್ನು ಹುಳುಗಳಿಗೆ ತಿನ್ನಲು ಹಾಕಿದ್ದರಿಂದ ಸಂಪೂರ್ಣ ಬೆಳೆ ನಾಶವಾಗಿದೆ ಎಂದು ಆರ್.ಆಂಜನೇಯ ತಿಳಿಸಿದ್ದಾರೆ.</p>.<p>ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ್ದ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮತ್ತು ವಿಸ್ತರಣಾಧಿಕಾರಿ ಎಂ.ಸಿ.ಭಾರತಿ ಅವರು ಸೊಪ್ಪಿಗೆ ವಿಷ ಸಿಂಪಡನೆಯನ್ನು ದೃಢೀಕರಿಸಿದ್ದು, ಅದರಿಂದಲೇ ಹುಳುಗಳು ಸತ್ತಿವೆ ಎಂದು ಹೇಳಿದ್ದಾರೆ.</p>.<p>ಈ ಸಂಬಂಧ ರೈತ ಪೋಲೀಸರಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕ ಆರ್.ಆಂಜನೇಯ ಅವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷವನ್ನು ಸಿಂಪಡಿಸಿದ್ದರಿಂದಾಗಿ ರೇಷ್ಮೆ ಹುಳುಗಳು ಸಾವಿಗೀಡಾಗಿವೆ.</p>.<p>ಹಣ್ಣಾದ ಹಂತದಲ್ಲಿದ್ದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟಾರೆ 300 ಮೊಟ್ಟೆಗಳ ಹುಳುಗಳು ಸತ್ತಿರುವುದರಿಂದ ರೈತರಿಗೆ ಸುಮಾರು ₹2.5 ಲಕ್ಷ ನಷ್ಟವಾಗಿದೆ. ನಾಲ್ಕು ಎಕರೆ ಹಿಪ್ಪುನೇರಳೆ ತೋಟದಲ್ಲಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ಶನಿವಾರ ವಿಷ ಸಿಂಪಡಿಸಿದ್ದು, ಆ ಸೊಪ್ಪನ್ನು ಹುಳುಗಳಿಗೆ ತಿನ್ನಲು ಹಾಕಿದ್ದರಿಂದ ಸಂಪೂರ್ಣ ಬೆಳೆ ನಾಶವಾಗಿದೆ ಎಂದು ಆರ್.ಆಂಜನೇಯ ತಿಳಿಸಿದ್ದಾರೆ.</p>.<p>ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ್ದ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮತ್ತು ವಿಸ್ತರಣಾಧಿಕಾರಿ ಎಂ.ಸಿ.ಭಾರತಿ ಅವರು ಸೊಪ್ಪಿಗೆ ವಿಷ ಸಿಂಪಡನೆಯನ್ನು ದೃಢೀಕರಿಸಿದ್ದು, ಅದರಿಂದಲೇ ಹುಳುಗಳು ಸತ್ತಿವೆ ಎಂದು ಹೇಳಿದ್ದಾರೆ.</p>.<p>ಈ ಸಂಬಂಧ ರೈತ ಪೋಲೀಸರಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>