ಗ್ರಾಮ ಪಂಚಾಯಿತಿ ಮುಖಂಡ ಪ್ರಭಾಕರ್ ಮಾತನಾಡಿ, ಸಿದ್ದಗಂಗಾಮಠದಲ್ಲಿ ಜಾತಿ, ಮತ, ಧರ್ಮ ಮೀರಿ ಎಲ್ಲ ವರ್ಗದ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಜತೆಗೆ ಶಿಕ್ಷಣ ನೀಡುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿದೆ ಎಂದರು.
ಮುಖಂಡ ಗಣೇಶಪ್ಪ ಮಾತನಾಡಿ, ದಾಸೋಹದ ಮೂಲಕ ದೇಶದಲ್ಲಿಯೇ ಹೆಸರುವಾಸಿಯಾಗಿದ್ದ ಶಿವಕುಮಾರ ಸ್ವಾಮೀಜಿ ಅವರ ಅಗಲಿಕೆ ದೇಶದ ಭಕ್ತ ಕೋಟಿಗೆ ಅಪಾರವಾದ ನೋವುಂಟಾಗಿದೆ. ಬಡ ವರ್ಗದ ಮಕ್ಕಳಿಗೆ ಶಿಕ್ಷಣ ನೀಡಿದ ಶ್ರೀಗಳು ಬಸವಣ್ಣನ ತತ್ವದಲ್ಲಿ ನಂಬಿಕೆ ಇಟ್ಟವರು. ಅವರ ಅಶಯದಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.