<p>ಆನೇಕಲ್: ಆನೇಕಲ್ ತಹಶೀಲ್ದಾರ್ ಆಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಾರಿದಳ ತಹಶೀಲ್ದಾರ್ ಆಗಿದ್ದ ಶಿವಪ್ಪ ಎಚ್. ಲಮಾಣಿ ವರ್ಗಾವಣೆಗೊಂಡಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದರು.</p>.<p>ಈ ಹಿಂದೆ ತಹಶೀಲ್ದಾರ್ ಆಗಿದ್ದ ಪಿ. ದಿನೇಶ್ ಅವರು ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದು ನೂತನ ತಹಶೀಲ್ದಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ತಾಲ್ಲೂಕು ಕಚೇರಿಯ ಸಿಬ್ಬಂದಿ ವರ್ಗಾವಣೆಗೊಂಡ ತಹಶೀಲ್ದಾರ್ ಅವರಿಗೆ ಬೀಳ್ಕೊಡುಗೆ ನೀಡಿದರು.</p>.<p>ದಿನೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಅಧಿಕಾರದಲ್ಲಿದ್ದ ಎರಡು ವರ್ಷದ ಅವಧಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು, ಕೋವಿಡ್ ನಿರ್ವಹಣೆ ಸೇರಿದಂತೆ ಹಲವು ಕೆಲಸಗಳು ತೃಪ್ತಿ ತಂದಿವೆ ಎಂದರು.</p>.<p>ತಹಶೀಲ್ದಾರ್ ಶಿವಪ್ಪ ಎಚ್. ಲಮಾಣಿ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಲು ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಹಕಾರ ನೀಡಬೇಕು. ಈ ಮೂಲಕ ಜನಸ್ನೇಹಿ ಆಡಳಿತ ನೀಡಲು ಸಹಕರಿಸಬೇಕು ಎಂದು ಕೋರಿದರು.</p>.<p>ವಿಶೇಷ ತಹಶೀಲ್ದಾರ್ ವೆಂಕಟಚಲಾಪತಿ, ಉಪ ತಹಶೀಲ್ದಾರ್ಗಳಾದ ಭಾಗ್ಯ, ಮಹೇಶ್, ಚಂದ್ರಶೇಖರ್, ಶಿರಸ್ತೇದಾರ್ಗಳಾದ ಚಂದ್ರಶೇಖರ್, ಚೇತನ್, ದಿನಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ಆನೇಕಲ್ ತಹಶೀಲ್ದಾರ್ ಆಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಾರಿದಳ ತಹಶೀಲ್ದಾರ್ ಆಗಿದ್ದ ಶಿವಪ್ಪ ಎಚ್. ಲಮಾಣಿ ವರ್ಗಾವಣೆಗೊಂಡಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದರು.</p>.<p>ಈ ಹಿಂದೆ ತಹಶೀಲ್ದಾರ್ ಆಗಿದ್ದ ಪಿ. ದಿನೇಶ್ ಅವರು ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದು ನೂತನ ತಹಶೀಲ್ದಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ತಾಲ್ಲೂಕು ಕಚೇರಿಯ ಸಿಬ್ಬಂದಿ ವರ್ಗಾವಣೆಗೊಂಡ ತಹಶೀಲ್ದಾರ್ ಅವರಿಗೆ ಬೀಳ್ಕೊಡುಗೆ ನೀಡಿದರು.</p>.<p>ದಿನೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಅಧಿಕಾರದಲ್ಲಿದ್ದ ಎರಡು ವರ್ಷದ ಅವಧಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು, ಕೋವಿಡ್ ನಿರ್ವಹಣೆ ಸೇರಿದಂತೆ ಹಲವು ಕೆಲಸಗಳು ತೃಪ್ತಿ ತಂದಿವೆ ಎಂದರು.</p>.<p>ತಹಶೀಲ್ದಾರ್ ಶಿವಪ್ಪ ಎಚ್. ಲಮಾಣಿ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಲು ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಹಕಾರ ನೀಡಬೇಕು. ಈ ಮೂಲಕ ಜನಸ್ನೇಹಿ ಆಡಳಿತ ನೀಡಲು ಸಹಕರಿಸಬೇಕು ಎಂದು ಕೋರಿದರು.</p>.<p>ವಿಶೇಷ ತಹಶೀಲ್ದಾರ್ ವೆಂಕಟಚಲಾಪತಿ, ಉಪ ತಹಶೀಲ್ದಾರ್ಗಳಾದ ಭಾಗ್ಯ, ಮಹೇಶ್, ಚಂದ್ರಶೇಖರ್, ಶಿರಸ್ತೇದಾರ್ಗಳಾದ ಚಂದ್ರಶೇಖರ್, ಚೇತನ್, ದಿನಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>