<p><strong>ವಿಜಯಪುರ(ದೇವನಹಳ್ಳಿ): </strong>ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಜೀವನ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಗಮೇಶ್ವರ ಧರ್ಮ ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಕುಮಾರ್ ತಿಳಿಸಿದರು.</p>.<p>ಇಲ್ಲಿನ ಚನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀಕೃಷ್ಣ ಯತೀಂದ್ರ ಸತ್ಸಂಗ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ಪಾರಾಯಣ, ಕೈವಾರ ತಾತಾಯ್ಯನವರ ತತ್ವ, ಶ್ರೀಕೃಷ್ಣ ಮಾಸಿಕ ದ್ವಾದಶಿ ವಿಚಾರಧಾರೆ ಗೋಷ್ಠಿಯಲ್ಲಿ ಮಾತನಾಡಿ, ಶ್ರೀಗಳ ಸೇವೆ ಇಡೀ ಸಮಾಜಕ್ಕೆ ದಾರಿದೀಪವಾಗಿದೆ ಎಂದರು.</p>.<p>ಕೃಷ್ಣ ಯತೀಂದ್ರ ಸತ್ಸಂಗವು ಕಳೆದ 25 ವರ್ಷಗಳಿಂದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಸೇವೆಯು ನಿಂತ ನೀರಾಗದೆ ಸದಾ ಹರಿಯುವಂತಾಗಲಿ ಎಂದು ನಗರ್ತ ಮಹಿಳಾ ಸಂಘದ ಅಧ್ಯಕ್ಷೆ ದೀಪ ಮುರುಳಿಧರ್ ತಿಳಿಸಿದರು.</p>.<p>ಜಾತಿ-ಮತದ ಭೇದವಿಲ್ಲದೆ ಸರ್ವಧರ್ಮೀಯರಿಗೂ ಆಶ್ರಯ ನೀಡಿದ ಸಿದ್ಧಗಂಗಾ ಮಠದ ಕೀರ್ತಿ ವಿಶ್ವಮಟ್ಟದಲ್ಲಿ ರಾರಾಜಿಸಲು ಶ್ರೀಗಳ ಶ್ರಮವೇ ಕಾರಣ ಎಂದು ಶಿಕ್ಷಕಿ ಗೀತಾ ಬಸವರಾಜು ಹೇಳಿದರು.</p>.<p>ಟ್ರಸ್ಟ್ ವತಿಯಿಂದ ಬಡವರಿಗೆ ಕಂಬಳಿ, ಸೀರೆ, ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಮಹಾಭಾರತ ಪುಸ್ತಕ ವಿತರಿಸಲಾಯಿತು. <br /> ಸಂಗೀತ ನಿರ್ದೇಶಕ ಎಂ.ವಿ.ನಾಯ್ಡು, ತಬಲ ವಾದಕ ಮುನಿರಾಜು ಅವರು ಮಹಾತ್ಮ ಆಂಜನೇಯ, ನರಸಿಂಹಪ್ಪ ಮತ್ತು ಸೀತಾ ಲಕ್ಷ್ಮಿ ಅವರು ಕನಕ-ಪುರಂದರ ದಾಸರ ಕೀರ್ತನೆಗಳನ್ನು ಹಾಡಿದರು.</p>.<p>ಟ್ರಸ್ಟ್ ಅಧ್ಯಕ್ಷ ಜೆ.ಎಸ್.ರಾಮಚಂದ್ರಪ್ಪ, ಎಂಬ್ರಹಳ್ಳಿ ನರಸಿಂಹಸ್ವಾಮಿ, ಬಿ.ಪುಟ್ಟರಾಜಣ್ಣ, ವಿ.ಎನ್. ವೆಂಕಟೇಶ್, ನಾಗಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ): </strong>ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಜೀವನ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಗಮೇಶ್ವರ ಧರ್ಮ ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಕುಮಾರ್ ತಿಳಿಸಿದರು.</p>.<p>ಇಲ್ಲಿನ ಚನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀಕೃಷ್ಣ ಯತೀಂದ್ರ ಸತ್ಸಂಗ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ಪಾರಾಯಣ, ಕೈವಾರ ತಾತಾಯ್ಯನವರ ತತ್ವ, ಶ್ರೀಕೃಷ್ಣ ಮಾಸಿಕ ದ್ವಾದಶಿ ವಿಚಾರಧಾರೆ ಗೋಷ್ಠಿಯಲ್ಲಿ ಮಾತನಾಡಿ, ಶ್ರೀಗಳ ಸೇವೆ ಇಡೀ ಸಮಾಜಕ್ಕೆ ದಾರಿದೀಪವಾಗಿದೆ ಎಂದರು.</p>.<p>ಕೃಷ್ಣ ಯತೀಂದ್ರ ಸತ್ಸಂಗವು ಕಳೆದ 25 ವರ್ಷಗಳಿಂದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಸೇವೆಯು ನಿಂತ ನೀರಾಗದೆ ಸದಾ ಹರಿಯುವಂತಾಗಲಿ ಎಂದು ನಗರ್ತ ಮಹಿಳಾ ಸಂಘದ ಅಧ್ಯಕ್ಷೆ ದೀಪ ಮುರುಳಿಧರ್ ತಿಳಿಸಿದರು.</p>.<p>ಜಾತಿ-ಮತದ ಭೇದವಿಲ್ಲದೆ ಸರ್ವಧರ್ಮೀಯರಿಗೂ ಆಶ್ರಯ ನೀಡಿದ ಸಿದ್ಧಗಂಗಾ ಮಠದ ಕೀರ್ತಿ ವಿಶ್ವಮಟ್ಟದಲ್ಲಿ ರಾರಾಜಿಸಲು ಶ್ರೀಗಳ ಶ್ರಮವೇ ಕಾರಣ ಎಂದು ಶಿಕ್ಷಕಿ ಗೀತಾ ಬಸವರಾಜು ಹೇಳಿದರು.</p>.<p>ಟ್ರಸ್ಟ್ ವತಿಯಿಂದ ಬಡವರಿಗೆ ಕಂಬಳಿ, ಸೀರೆ, ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಮಹಾಭಾರತ ಪುಸ್ತಕ ವಿತರಿಸಲಾಯಿತು. <br /> ಸಂಗೀತ ನಿರ್ದೇಶಕ ಎಂ.ವಿ.ನಾಯ್ಡು, ತಬಲ ವಾದಕ ಮುನಿರಾಜು ಅವರು ಮಹಾತ್ಮ ಆಂಜನೇಯ, ನರಸಿಂಹಪ್ಪ ಮತ್ತು ಸೀತಾ ಲಕ್ಷ್ಮಿ ಅವರು ಕನಕ-ಪುರಂದರ ದಾಸರ ಕೀರ್ತನೆಗಳನ್ನು ಹಾಡಿದರು.</p>.<p>ಟ್ರಸ್ಟ್ ಅಧ್ಯಕ್ಷ ಜೆ.ಎಸ್.ರಾಮಚಂದ್ರಪ್ಪ, ಎಂಬ್ರಹಳ್ಳಿ ನರಸಿಂಹಸ್ವಾಮಿ, ಬಿ.ಪುಟ್ಟರಾಜಣ್ಣ, ವಿ.ಎನ್. ವೆಂಕಟೇಶ್, ನಾಗಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>