<p>ಆನೇಕಲ್:ಕವಿ ಡಾ.ಸಿದ್ಧಲಿಂಗಯ್ಯ ಅವರು ತಮ್ಮ ಕಾವ್ಯ, ಕಥೆ, ನಾಟಕಗಳ ಮೂಲಕ ಶೋಷಿತರು ಮತ್ತು ಹಿಂದುಳಿದ ವರ್ಗಗಳ ದನಿಯಾಗಿದ್ದರು ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ<br />ತಿಳಿಸಿದರು.</p>.<p>ಅವರು ಪಟ್ಟಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಆಯೋಜಿಸಿದ್ದ ಡಾ.ಸಿದ್ಧಲಿಂಗಯ್ಯ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.</p>.<p>21ನೇ ವಯಸ್ಸಿಗೆ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡ ಸಿದ್ಧಲಿಂಗಯ್ಯ ಅವರು ರಾಜ್ಯದಲ್ಲಿ ಪ್ರಮುಖ ಸಂಘಟನೆಯಾಗಿದ್ದ ದಲಿತ ಸಂಘರ್ಷ ಸಮಿತಿಯ ರಚನೆಯಲ್ಲಿ ಪಾತ್ರ ವಹಿಸಿದ್ದರು. ತಮ್ಮ ಹಾಡುಗಳ ಮೂಲಕ ಹೋರಾಟದ ಕಿಚ್ಚನ್ನು ಹಬ್ಬಿಸಿದ್ದರು ಎಂದರು.</p>.<p>ಸಿದ್ದಲಿಂಗಯ್ಯ ಅವರ ಬದುಕು ಬರಹ ಮತ್ತು ವಿಚಾರಧಾರೆ ಬಿಂಬಿಸುವ ಸ್ಮಾರಕವೊಂದನ್ನು ಜ್ಞಾನಭಾರತಿ ಆವರಣದಲ್ಲಿ ತೆರೆಯಬೇಕು. ಪದ್ಮಶ್ರೀ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು<br />ಒತ್ತಾಯಿಸಿದರು.</p>.<p>ಸಂಘಟನೆಯ ತಾಲ್ಲೂಕು ಅಧ್ಯಕ್ಷ ರವಿ, ಮುಖಂಡರಾದ ಹೊಂಪಲಘಟ್ಟ ಮುನಿಯಪ್ಪ, ಲವ, ಚಿರಂಜೀವಿ, ಸಬ್ಮಂಗಲ ರವಿ, ಆರ್. ವೆಂಕಟೇಶ್, ಗಣೇಶ್, ಚಂದ್ರಶೇಖರ್, ಮುರುಗೇಶ್, ನಾಗರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್:ಕವಿ ಡಾ.ಸಿದ್ಧಲಿಂಗಯ್ಯ ಅವರು ತಮ್ಮ ಕಾವ್ಯ, ಕಥೆ, ನಾಟಕಗಳ ಮೂಲಕ ಶೋಷಿತರು ಮತ್ತು ಹಿಂದುಳಿದ ವರ್ಗಗಳ ದನಿಯಾಗಿದ್ದರು ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ<br />ತಿಳಿಸಿದರು.</p>.<p>ಅವರು ಪಟ್ಟಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಆಯೋಜಿಸಿದ್ದ ಡಾ.ಸಿದ್ಧಲಿಂಗಯ್ಯ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.</p>.<p>21ನೇ ವಯಸ್ಸಿಗೆ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡ ಸಿದ್ಧಲಿಂಗಯ್ಯ ಅವರು ರಾಜ್ಯದಲ್ಲಿ ಪ್ರಮುಖ ಸಂಘಟನೆಯಾಗಿದ್ದ ದಲಿತ ಸಂಘರ್ಷ ಸಮಿತಿಯ ರಚನೆಯಲ್ಲಿ ಪಾತ್ರ ವಹಿಸಿದ್ದರು. ತಮ್ಮ ಹಾಡುಗಳ ಮೂಲಕ ಹೋರಾಟದ ಕಿಚ್ಚನ್ನು ಹಬ್ಬಿಸಿದ್ದರು ಎಂದರು.</p>.<p>ಸಿದ್ದಲಿಂಗಯ್ಯ ಅವರ ಬದುಕು ಬರಹ ಮತ್ತು ವಿಚಾರಧಾರೆ ಬಿಂಬಿಸುವ ಸ್ಮಾರಕವೊಂದನ್ನು ಜ್ಞಾನಭಾರತಿ ಆವರಣದಲ್ಲಿ ತೆರೆಯಬೇಕು. ಪದ್ಮಶ್ರೀ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು<br />ಒತ್ತಾಯಿಸಿದರು.</p>.<p>ಸಂಘಟನೆಯ ತಾಲ್ಲೂಕು ಅಧ್ಯಕ್ಷ ರವಿ, ಮುಖಂಡರಾದ ಹೊಂಪಲಘಟ್ಟ ಮುನಿಯಪ್ಪ, ಲವ, ಚಿರಂಜೀವಿ, ಸಬ್ಮಂಗಲ ರವಿ, ಆರ್. ವೆಂಕಟೇಶ್, ಗಣೇಶ್, ಚಂದ್ರಶೇಖರ್, ಮುರುಗೇಶ್, ನಾಗರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>