ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾರುಕಟ್ಟೆಯಲ್ಲಿ ರೈತರಿಗೆ ಅನುಕೂಲವಾದ ಎಲ್ಲಾ ರೀತಿಯ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಇ-ಹರಾಜು ಮಾಡಲಾಗುತ್ತಿದೆ. ಹರಾಜಿನಲ್ಲಿ ಭಾಗವಹಿಸುವ ನೂಲು ಬಿಚ್ಚಾಣಿಕೆದಾರರಿಂದ ಹರಾಜಿಗೂ ಮೊದಲೇ ಹಣವನ್ನು ನಮ್ಮ ಖಾತೆಗೆ ಜಮೆ ಮಾಡಿಸಿಕೊಂಡ ನಂತರವೇ ಅವರಿಗೆ ಹರಾಜಿನಲ್ಲಿ ಭಾಗವಹಿಸಲಿಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ’ ಎಂದರು.