<p><strong>ವಿಜಯಪುರ: </strong>‘ವ್ಯಕ್ತಿ ಯಾರೇ ಆಗಿದ್ದರೂ ಹುಟ್ಟಿದ ಮೇಲೆ ತನ್ನನ್ನು ತಾನು ಗುರುವಿಗೆ ಸಮರ್ಪಿಸಿಕೊಳ್ಳದಿದ್ದರೆ ಅಥವಾ ಶರಣಾಗತನಾಗದಿದ್ದರೆ ಮುಕ್ತಿ ಸಿಗುವುದಿಲ್ಲ’ ಎಂದು ಕೈವಾರ ಧರ್ಮದರ್ಶಿ ಎಂ.ಆರ್. ಜಯರಾಮ್ ಹೇಳಿದರು.</p>.<p>ಹೋಬಳಿಯ ಭಟ್ರೇನಹಳ್ಳಿ ಸಾಯಿನಾಥ ಜ್ಞಾನಮಂದಿರದಲ್ಲಿ ಆಯೋಜಿಸಿದ್ದ ಶಿರಡಿ ಸಾಯಿಬಾಬಾ ಸಮಾಧಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಜಗತ್ತಿನಲ್ಲಿ ಸಾಕಷ್ಟು ಮಂದಿ ಅವಧೂತರಿದ್ದಾರೆ. ಅವರೆಲ್ಲರನ್ನು ಅನುಸರಿಸಲು ಆಗದಿದ್ದರೂ, ಕೆಲವರ ಧ್ಯೇಯ ಹಾಗೂ ತತ್ವಗಳನ್ನು ಪಾಲಿಸಿದರೆ ಒಳಿತಾಗುತ್ತದೆ ಎಂದು ಹೇಳಿದರು.</p>.<p>ಜೀವನದಲ್ಲಿ ಏಳಿಗೆ ಕಷ್ಟ. ಈ ಅಂಶವನ್ನು ಶಿರಡಿ ಸಾಯಿಬಾಬಾ ಬಲವಾಗಿ ನಂಬಿದ್ದರು. ಅದನ್ನೇ ಬೋಧಿಸುತ್ತಿದ್ದರು. ದುರ್ಗುಣಗಳಿಗೆ ವಿಮುಖರಾಗಿ ಆತ್ಮ ಸಾಕ್ಷಾತ್ಕಾರಕ್ಕೆ ಮುಂದಾಗಿ ಎಂಬ ಸಾಯಿಬಾಬಾ ಅವರ ಆದೇಶ ಬದುಕಿಗೆ ಉತ್ತಮ ಮಾರ್ಗ ದರ್ಶನವಾಗಿದೆ ಎಂದರು.</p>.<p>‘ಅವರು ಭಕ್ತರಿಗೆ ಬೋಧಿಸುತ್ತಿದ್ದ ಅಂಶಗಳು ಹಿಂದೂ ಮತ್ತು ಮುಸ್ಲಿಂ ಧರ್ಮಗಳ ತತ್ವಗಳಿಂದ ಪಕ್ವವಾಗಿ ಮನುಕುಲದ ಏಳಿಗೆಗೆ ಮಾರ್ಗದರ್ಶಿಗಳಾಗಿದ್ದವು. ನಾವೀಗ ಅವನ್ನು ಪಾಲಿಸಿದರೆ ಸತ್ಪ್ರಜೆಗಳಾಗುತ್ತೇವೆ, ಸಮಾಜವೂ ಏಳಿಗೆಯಾಗುತ್ತದೆ’ ಎಂದರು.</p>.<p>ಬಾಬಾ ಅವರು ತಮ್ಮ ಜೀವಿತಾವಧಿಯಲ್ಲಿ ಯಾವುದೇ ಒಂದು ಜಾತಿಗಾಗಲಿ ಅಥವಾ ಧರ್ಮಕ್ಕಾಗಲಿ ಬೆಲೆ ಕೊಟ್ಟವರಲ್ಲ. ಅವರು ಕೊಡುತ್ತಿದ್ದ ಬೆಲೆ ಒಂದೇ ಒಂದು ಧರ್ಮಕ್ಕೆ ಮಾತ್ರ. ಅದು ‘ಮನುಷ್ಯ’ ಧರ್ಮ. ಹೀಗಾಗಿ ಅವರ ವ್ಯಕ್ತಿತ್ವ ಧರ್ಮಾತೀತ ಹಾಗೂ ಜಾತ್ಯತೀತ ಎಂದರು.</p>.<p>ಬೆಂಗಳೂರಿನ ಸೃಷ್ಟಿ ಆರ್ಟ್ ಫೌಂಡೇಷನ್ನ ವೇದಾ ದೀಕ್ಷಿತ್ ವೆಲ್ಲಾಬ್ ಅವರ ಶಿಷ್ಯರು ಭರತನಾಟ್ಯ ನೃತ್ಯ ಪ್ರದರ್ಶನ ನೀಡಿದರು.</p>.<p>ದೇವಾಲಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಸೇವಾಕರ್ತರಾದ ಮೇಲೂರು ಎಚ್.ವಿ.ರಾಮಕೃಷ್ಣಪ್ಪ, ಕೆ. ಸೀತಾರಾಮರೆಡ್ಡಿ, ಎಂ.ಎನ್.ಗೋಪಾಲಪ್ಪ, ವೀಣಾದೇವಿ, ರತ್ನಮ್ಮ, ಪ್ರಮೀಳಾ, ದಿನದ ಪೂಜಾ ಸೇವಾಕರ್ತರಾದ ಎಸ್.ಎನ್.ಸುರೇಶ್, ನಾಗರತ್ನ, ಸನತ್ ಶ್ರೀನಾಥ್, ನಾಗಮಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>‘ವ್ಯಕ್ತಿ ಯಾರೇ ಆಗಿದ್ದರೂ ಹುಟ್ಟಿದ ಮೇಲೆ ತನ್ನನ್ನು ತಾನು ಗುರುವಿಗೆ ಸಮರ್ಪಿಸಿಕೊಳ್ಳದಿದ್ದರೆ ಅಥವಾ ಶರಣಾಗತನಾಗದಿದ್ದರೆ ಮುಕ್ತಿ ಸಿಗುವುದಿಲ್ಲ’ ಎಂದು ಕೈವಾರ ಧರ್ಮದರ್ಶಿ ಎಂ.ಆರ್. ಜಯರಾಮ್ ಹೇಳಿದರು.</p>.<p>ಹೋಬಳಿಯ ಭಟ್ರೇನಹಳ್ಳಿ ಸಾಯಿನಾಥ ಜ್ಞಾನಮಂದಿರದಲ್ಲಿ ಆಯೋಜಿಸಿದ್ದ ಶಿರಡಿ ಸಾಯಿಬಾಬಾ ಸಮಾಧಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಜಗತ್ತಿನಲ್ಲಿ ಸಾಕಷ್ಟು ಮಂದಿ ಅವಧೂತರಿದ್ದಾರೆ. ಅವರೆಲ್ಲರನ್ನು ಅನುಸರಿಸಲು ಆಗದಿದ್ದರೂ, ಕೆಲವರ ಧ್ಯೇಯ ಹಾಗೂ ತತ್ವಗಳನ್ನು ಪಾಲಿಸಿದರೆ ಒಳಿತಾಗುತ್ತದೆ ಎಂದು ಹೇಳಿದರು.</p>.<p>ಜೀವನದಲ್ಲಿ ಏಳಿಗೆ ಕಷ್ಟ. ಈ ಅಂಶವನ್ನು ಶಿರಡಿ ಸಾಯಿಬಾಬಾ ಬಲವಾಗಿ ನಂಬಿದ್ದರು. ಅದನ್ನೇ ಬೋಧಿಸುತ್ತಿದ್ದರು. ದುರ್ಗುಣಗಳಿಗೆ ವಿಮುಖರಾಗಿ ಆತ್ಮ ಸಾಕ್ಷಾತ್ಕಾರಕ್ಕೆ ಮುಂದಾಗಿ ಎಂಬ ಸಾಯಿಬಾಬಾ ಅವರ ಆದೇಶ ಬದುಕಿಗೆ ಉತ್ತಮ ಮಾರ್ಗ ದರ್ಶನವಾಗಿದೆ ಎಂದರು.</p>.<p>‘ಅವರು ಭಕ್ತರಿಗೆ ಬೋಧಿಸುತ್ತಿದ್ದ ಅಂಶಗಳು ಹಿಂದೂ ಮತ್ತು ಮುಸ್ಲಿಂ ಧರ್ಮಗಳ ತತ್ವಗಳಿಂದ ಪಕ್ವವಾಗಿ ಮನುಕುಲದ ಏಳಿಗೆಗೆ ಮಾರ್ಗದರ್ಶಿಗಳಾಗಿದ್ದವು. ನಾವೀಗ ಅವನ್ನು ಪಾಲಿಸಿದರೆ ಸತ್ಪ್ರಜೆಗಳಾಗುತ್ತೇವೆ, ಸಮಾಜವೂ ಏಳಿಗೆಯಾಗುತ್ತದೆ’ ಎಂದರು.</p>.<p>ಬಾಬಾ ಅವರು ತಮ್ಮ ಜೀವಿತಾವಧಿಯಲ್ಲಿ ಯಾವುದೇ ಒಂದು ಜಾತಿಗಾಗಲಿ ಅಥವಾ ಧರ್ಮಕ್ಕಾಗಲಿ ಬೆಲೆ ಕೊಟ್ಟವರಲ್ಲ. ಅವರು ಕೊಡುತ್ತಿದ್ದ ಬೆಲೆ ಒಂದೇ ಒಂದು ಧರ್ಮಕ್ಕೆ ಮಾತ್ರ. ಅದು ‘ಮನುಷ್ಯ’ ಧರ್ಮ. ಹೀಗಾಗಿ ಅವರ ವ್ಯಕ್ತಿತ್ವ ಧರ್ಮಾತೀತ ಹಾಗೂ ಜಾತ್ಯತೀತ ಎಂದರು.</p>.<p>ಬೆಂಗಳೂರಿನ ಸೃಷ್ಟಿ ಆರ್ಟ್ ಫೌಂಡೇಷನ್ನ ವೇದಾ ದೀಕ್ಷಿತ್ ವೆಲ್ಲಾಬ್ ಅವರ ಶಿಷ್ಯರು ಭರತನಾಟ್ಯ ನೃತ್ಯ ಪ್ರದರ್ಶನ ನೀಡಿದರು.</p>.<p>ದೇವಾಲಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಸೇವಾಕರ್ತರಾದ ಮೇಲೂರು ಎಚ್.ವಿ.ರಾಮಕೃಷ್ಣಪ್ಪ, ಕೆ. ಸೀತಾರಾಮರೆಡ್ಡಿ, ಎಂ.ಎನ್.ಗೋಪಾಲಪ್ಪ, ವೀಣಾದೇವಿ, ರತ್ನಮ್ಮ, ಪ್ರಮೀಳಾ, ದಿನದ ಪೂಜಾ ಸೇವಾಕರ್ತರಾದ ಎಸ್.ಎನ್.ಸುರೇಶ್, ನಾಗರತ್ನ, ಸನತ್ ಶ್ರೀನಾಥ್, ನಾಗಮಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>