<p><strong>ದೇವನಹಳ್ಳಿ:</strong> ರಾಜ್ಯದಲ್ಲೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೋಮವಾರ ಆರಂಭಗೊಂಡ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಜಿಲ್ಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಆರಂಭವಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಟೌನ್ನ 16ನೇ ವಾರ್ಡ್ನಲ್ಲಿ ಸಮೀಕ್ಷೆಗೆ ಚಾಲನೆ ನೀಡಿದರು.</p>.<p>ಸಮೀಕ್ಷೆಗಾಗಿ ನೀಯೋಜಿಸಿರುವ ಸಿಬ್ಬಂದಿ ಮೇಲ್ವಿಚಾರಕರ ನೇತೃತ್ವದಲ್ಲಿ ಮನೆ ಮನೆ ಭೇಟಿ ಕೆಲಸ ಆರಂಭಿಸಿದರು.</p>.<p>ಸಮೀಕ್ಷೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಆಯೋಗವು ಸಮೀಕ್ಷೆಯನ್ನು ಸೆ.22 ರಿಂದ ಅ.7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3,286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು, ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p><strong>ಆಧಾರ್</strong> <strong>ಕಡ್ಡಾಯ: </strong>ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆ್ಯಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ಗೆ ಒಟಿಪಿ ಬರುತ್ತದೆ ಎಂದರು.</p>.<p>ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ. ಗಣತಿದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.</p>.<p>ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ, ಅಗತ್ಯತೆ ಮತ್ತು ಇತರೆ ಸಾಮಾಜಿಕ ಅಂಶ ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರ ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಎಂಜಿನಿಯರ್ ಗಜೇಂದ್ರ ಉಪಸ್ಥಿತರಿದ್ದರು.</p>.<p><strong>ಸಹಾಯವಾಣಿ</strong> </p><p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 5 ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿ ದೂರವಾಣಿ ಸಂಖ್ಯೆ 080-22449999 ದೇವನಹಳ್ಳಿ; 9036858653 ದೊಡ್ಡಬಳ್ಳಾಪುರ; 8884579990 ಹೊಸಕೋಟೆ; 080-27931104 ನೆಲಮಂಗಲ; 9740100884. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ರಾಜ್ಯದಲ್ಲೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೋಮವಾರ ಆರಂಭಗೊಂಡ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಜಿಲ್ಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಆರಂಭವಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಟೌನ್ನ 16ನೇ ವಾರ್ಡ್ನಲ್ಲಿ ಸಮೀಕ್ಷೆಗೆ ಚಾಲನೆ ನೀಡಿದರು.</p>.<p>ಸಮೀಕ್ಷೆಗಾಗಿ ನೀಯೋಜಿಸಿರುವ ಸಿಬ್ಬಂದಿ ಮೇಲ್ವಿಚಾರಕರ ನೇತೃತ್ವದಲ್ಲಿ ಮನೆ ಮನೆ ಭೇಟಿ ಕೆಲಸ ಆರಂಭಿಸಿದರು.</p>.<p>ಸಮೀಕ್ಷೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಆಯೋಗವು ಸಮೀಕ್ಷೆಯನ್ನು ಸೆ.22 ರಿಂದ ಅ.7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3,286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು, ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p><strong>ಆಧಾರ್</strong> <strong>ಕಡ್ಡಾಯ: </strong>ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆ್ಯಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ಗೆ ಒಟಿಪಿ ಬರುತ್ತದೆ ಎಂದರು.</p>.<p>ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ. ಗಣತಿದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.</p>.<p>ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ, ಅಗತ್ಯತೆ ಮತ್ತು ಇತರೆ ಸಾಮಾಜಿಕ ಅಂಶ ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರ ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಎಂಜಿನಿಯರ್ ಗಜೇಂದ್ರ ಉಪಸ್ಥಿತರಿದ್ದರು.</p>.<p><strong>ಸಹಾಯವಾಣಿ</strong> </p><p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 5 ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿ ದೂರವಾಣಿ ಸಂಖ್ಯೆ 080-22449999 ದೇವನಹಳ್ಳಿ; 9036858653 ದೊಡ್ಡಬಳ್ಳಾಪುರ; 8884579990 ಹೊಸಕೋಟೆ; 080-27931104 ನೆಲಮಂಗಲ; 9740100884. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>