<p><strong>ದೇವನಹಳ್ಳಿ:</strong> ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆದಾರರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿ, ಯಾವುದೇ ಕಾರಣಕ್ಕೂ ಮಾಹಿತಿ ನೀಡಲು ಹಿಂಜರಿಯಬೇಡಿ. ಸಮೀಕ್ಷೆಗೆ ಬಗೆಗಿನ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಹೇಳಿದರು.</p>.<p>ಪಟ್ಟಣದಲ್ಲಿ ನಡೆಯುತ್ತಿರುವ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯನ್ನು ಶನಿವಾರ ಖುದ್ದು ಮನೆಮನೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>ಸಮೀಕ್ಷೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಇನ್ನೂ ಆಧಾರ್ ಕಾರ್ಡ್ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ, ಲಿಂಕ್ ಮಾಡಿಕೊಳ್ಳಬೇಕು. ಹಾಗೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯ. ಇ-ಕೈವೈಸಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದರು.</p>.<p>ಸಮೀಕ್ಷೆ ಮಾಡುವ ಸಂದರ್ಭದಲ್ಲಿ ನೆರ್ಟ್ವರ್ಕ್ ಸಮಸ್ಯೆ ಕೆಲವೊಂದು ಸಂದರ್ಭಗಳಲ್ಲಿ ಉಂಟಾಗುತ್ತದೆ. ಸಾರ್ವಜನಿಕರು ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಿ ಎಂದರು.</p>.<p>ದೇವನಹಳ್ಳಿ ತಾಲ್ಲೂಕು ಇಒ ಶ್ರೀನಾಥ್ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ, ಗಣತಿದಾರರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆದಾರರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿ, ಯಾವುದೇ ಕಾರಣಕ್ಕೂ ಮಾಹಿತಿ ನೀಡಲು ಹಿಂಜರಿಯಬೇಡಿ. ಸಮೀಕ್ಷೆಗೆ ಬಗೆಗಿನ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಹೇಳಿದರು.</p>.<p>ಪಟ್ಟಣದಲ್ಲಿ ನಡೆಯುತ್ತಿರುವ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯನ್ನು ಶನಿವಾರ ಖುದ್ದು ಮನೆಮನೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>ಸಮೀಕ್ಷೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಇನ್ನೂ ಆಧಾರ್ ಕಾರ್ಡ್ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ, ಲಿಂಕ್ ಮಾಡಿಕೊಳ್ಳಬೇಕು. ಹಾಗೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯ. ಇ-ಕೈವೈಸಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದರು.</p>.<p>ಸಮೀಕ್ಷೆ ಮಾಡುವ ಸಂದರ್ಭದಲ್ಲಿ ನೆರ್ಟ್ವರ್ಕ್ ಸಮಸ್ಯೆ ಕೆಲವೊಂದು ಸಂದರ್ಭಗಳಲ್ಲಿ ಉಂಟಾಗುತ್ತದೆ. ಸಾರ್ವಜನಿಕರು ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಿ ಎಂದರು.</p>.<p>ದೇವನಹಳ್ಳಿ ತಾಲ್ಲೂಕು ಇಒ ಶ್ರೀನಾಥ್ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ, ಗಣತಿದಾರರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>