ದೇವಾಲಯಗಳು ಬಂದ್: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಕನಸವಾಡಿಯ ಶನಿಮಹಾತ್ಮ ದೇವಾಲಯ, ನಗರದ ರಾಮಲಿಂಗ ಚೌಡೇಶ್ವರಿ ದೇವಾಲಯ, ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳನ್ನು ಬೆಳಿಗ್ಗೆ 9ರಿಂದಲೇ ಬಂದ್ ಮಾಡಲಾಗಿತ್ತು. ಮಧ್ಯಾಹ್ನ 2 ಗಂಟೆ ನಂತರ ದೇವಾಲಯವನ್ನು ಸ್ವಚ್ಛಗೊಳಿಸಿ ಸಂಜೆ 5 ಗಂಟೆಯ ನಂತರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ನೀಡಲಾಯಿತು.