<p><strong>ದೊಡ್ಡಬಳ್ಳಾಪುರ:</strong> ಭಾನುವಾರ ಸಂಭವಿಸಿದ ಕಂಕಣ ಸೂರ್ಯಗ್ರಹಣವನ್ನು ತಾಲ್ಲೂಕಿನಾದ್ಯಂತ ಖಗೋಳ ಪ್ರೇಮಿಗಳು ವೀಕ್ಷಿಸಿದರು. ಆದರೆ ಬೆಂಗಳೂರು ಭಾಗದಲ್ಲಿ ಪಾರ್ಶ್ವ ಗ್ರಹಣ ಗೋಚರಿಸಿದ್ದರಿಂದ ಹಾಗೂ ತಾಲ್ಲೂಕಿನಲ್ಲಿ ಬೆಳಗಿನಿಂದಲೂ ಸಹ ಮೋಡಕವಿದ ವಾತಾವರಣ ಇದ್ದುದ್ದರಿಂದ ಪೂರ್ಣ ಗ್ರಹಣದ ಆನಂದ ಸವಿಯಲು ಸಾಧ್ಯವಾಗಲಿಲ್ಲ.</p>.<p>ಗ್ರಹಣವನ್ನು ವಿಶೇಷ ಕನ್ನಡಕಗಳ ಮೂಲಕ ಬಹಳಷ್ಟು ಸಾರ್ವಜನಿಕರು ವೀಕ್ಷಿಸಿದರು. ಗ್ರಹಣದಿಂದಾಗಿ ಬಹಳಷ್ಟು ಜನ ಮನೆಯಿಂದ ಹೊರಗೆ ಬರಲಿಲ್ಲ. ಭಾನುವಾರವಾಗಿದ್ದರಿಂದ ಸಂಚಾರವೂ ಸಹ ವಿರಳವಾಗಿತ್ತು. ಬಹುತೇಕ ಹೋಟೆಲ್ಗಳು ಮುಚ್ಚಿದ್ದವು. ಬೆಳಿಗ್ಗೆ 10 ಗಂಟೆಗೆ ಗ್ರಹಣ ಆರಂಭವಾಯಿತಾದರೂ ಮಧ್ಯಕಾಲದ ವೇಳೆಗೆ ಮೋಡಗಳಿದ್ದುದರಿಂದ ಸ್ಪಷ್ಟವಾಗಿ ಗೋಚರಿಸಲಿಲ್ಲ.</p>.<p><strong>ದೇವಾಲಯಗಳು ಬಂದ್: </strong>ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಕನಸವಾಡಿಯ ಶನಿಮಹಾತ್ಮ ದೇವಾಲಯ, ನಗರದ ರಾಮಲಿಂಗ ಚೌಡೇಶ್ವರಿ ದೇವಾಲಯ, ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳನ್ನು ಬೆಳಿಗ್ಗೆ 9ರಿಂದಲೇ ಬಂದ್ ಮಾಡಲಾಗಿತ್ತು. ಮಧ್ಯಾಹ್ನ 2 ಗಂಟೆ ನಂತರ ದೇವಾಲಯವನ್ನು ಸ್ವಚ್ಛಗೊಳಿಸಿ ಸಂಜೆ 5 ಗಂಟೆಯ ನಂತರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಭಾನುವಾರ ಸಂಭವಿಸಿದ ಕಂಕಣ ಸೂರ್ಯಗ್ರಹಣವನ್ನು ತಾಲ್ಲೂಕಿನಾದ್ಯಂತ ಖಗೋಳ ಪ್ರೇಮಿಗಳು ವೀಕ್ಷಿಸಿದರು. ಆದರೆ ಬೆಂಗಳೂರು ಭಾಗದಲ್ಲಿ ಪಾರ್ಶ್ವ ಗ್ರಹಣ ಗೋಚರಿಸಿದ್ದರಿಂದ ಹಾಗೂ ತಾಲ್ಲೂಕಿನಲ್ಲಿ ಬೆಳಗಿನಿಂದಲೂ ಸಹ ಮೋಡಕವಿದ ವಾತಾವರಣ ಇದ್ದುದ್ದರಿಂದ ಪೂರ್ಣ ಗ್ರಹಣದ ಆನಂದ ಸವಿಯಲು ಸಾಧ್ಯವಾಗಲಿಲ್ಲ.</p>.<p>ಗ್ರಹಣವನ್ನು ವಿಶೇಷ ಕನ್ನಡಕಗಳ ಮೂಲಕ ಬಹಳಷ್ಟು ಸಾರ್ವಜನಿಕರು ವೀಕ್ಷಿಸಿದರು. ಗ್ರಹಣದಿಂದಾಗಿ ಬಹಳಷ್ಟು ಜನ ಮನೆಯಿಂದ ಹೊರಗೆ ಬರಲಿಲ್ಲ. ಭಾನುವಾರವಾಗಿದ್ದರಿಂದ ಸಂಚಾರವೂ ಸಹ ವಿರಳವಾಗಿತ್ತು. ಬಹುತೇಕ ಹೋಟೆಲ್ಗಳು ಮುಚ್ಚಿದ್ದವು. ಬೆಳಿಗ್ಗೆ 10 ಗಂಟೆಗೆ ಗ್ರಹಣ ಆರಂಭವಾಯಿತಾದರೂ ಮಧ್ಯಕಾಲದ ವೇಳೆಗೆ ಮೋಡಗಳಿದ್ದುದರಿಂದ ಸ್ಪಷ್ಟವಾಗಿ ಗೋಚರಿಸಲಿಲ್ಲ.</p>.<p><strong>ದೇವಾಲಯಗಳು ಬಂದ್: </strong>ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಕನಸವಾಡಿಯ ಶನಿಮಹಾತ್ಮ ದೇವಾಲಯ, ನಗರದ ರಾಮಲಿಂಗ ಚೌಡೇಶ್ವರಿ ದೇವಾಲಯ, ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳನ್ನು ಬೆಳಿಗ್ಗೆ 9ರಿಂದಲೇ ಬಂದ್ ಮಾಡಲಾಗಿತ್ತು. ಮಧ್ಯಾಹ್ನ 2 ಗಂಟೆ ನಂತರ ದೇವಾಲಯವನ್ನು ಸ್ವಚ್ಛಗೊಳಿಸಿ ಸಂಜೆ 5 ಗಂಟೆಯ ನಂತರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>