‘ಬರಲಿರುವ ಕಂಕಣ ಸೂರ್ಯಗ್ರಹಣದ ವಿಶೇಷವೆಂದರೆ ಕರಾವಳಿಯಲ್ಲಿ ಪೂರ್ಣ ಕಂಕಣ ಗ್ರಹಣ ಕಾಣಿಸಲಿದ್ದು, ರಾಜ್ಯದ ಉಳಿದ ಭಾಗಗಳಲ್ಲಿ ಶೇ 90ರಷ್ಟು ಕಂಡುಬರಲಿದೆ. ಸೂರ್ಯನ ಸುತ್ತ ಸುತ್ತುವ ಭೂಮಿ ಮತ್ತು ಭೂಮಿಯ ಸುತ್ತ ಸುತ್ತುವ ಚಂದ್ರನ ಚಲನೆಯ ಸಂದರ್ಭದಲ್ಲಿ ಭೂಮಿ, ಸೂರ್ಯನ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣವಾಗುತ್ತದೆ. ಹಾಗೆ ನೋಡಿದರೆ, ಪ್ರತಿ ಅಮಾವಾಸ್ಯೆಯಂದು ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬರುತ್ತಾನಾದರೂ ಅವುಗಳ ಚಲನೆಯ ಪಥ ನಿರ್ದಿಷ್ಟ ಕೇಂದ್ರದಲ್ಲಿ ಸಂಧಿಸಿದಾಗ ಮಾತ್ರ ಗ್ರಹಣವಾಗುತ್ತದೆ. ಅಂಥ ಸಂದರ್ಭ ಈಗ ರಾಜ್ಯದಲ್ಲಿ ಕಾಣಲಿದೆ’ ಎಂದರು.