<p><strong>ಹೊಸಕೋಟೆ: </strong>‘ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಗ್ರಾಮಗಳಿಗೆ ಸೋಲಾರ್ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ’ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ಅವರು ತಾಲ್ಲೂಕಿನ ದೊಡ್ಡ ಹುಲ್ಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಸೊಣ್ಣದೇನಹಳ್ಳಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.</p>.<p>‘ಗ್ರಾಮ ಪಂಚಾಯಿತಿಗಳಿಗೆ ಬರುವ ಹಣದಲ್ಲಿ ಹೆಚ್ಚಿನ ಹಣವನ್ನು ಗ್ರಾಮಗಳ ಬೀದಿ ದೀಪಗಳಿಗೆ ಹಾಗೂ ಪಂಪ್ಗಳಿಗೆ ಕೊಡಬೇಕಾಗಿರುವುದರಿಂದ ಗ್ರಾಮಗಳ ಉಳಿಕೆ ಅಭಿವೃದ್ಧಿ ಕೆಲಸ ಮಾಡಲು ಅನನುಕೂಲವಾಗುತ್ತದೆ. ಆದ್ದರಿಂದ ಸೋಲಾರ್ ದೀಪ ಅಳವಡಿಸಿದರೆ ಈ ಸಮಸ್ಯೆ ಪರಿಹಾರವಾಗುತ್ತದೆ’ ಎಂದರು.</p>.<p>‘ಈಗ ಗ್ರಾಮದ ಎಲ್ಲಾ ದೀಪಗಳಿಗೆ ಒಂದೆಡೆ ಪ್ಯಾನಲ್ಗಳನ್ನು ಜೋಡಿಸಿ ಅದರಿಂದ ಎಲ್ಲಾ ದೀಪಗಳು ಉರಿಯುವಂತೆ ಮಾಡಬಹುದಾದ್ದರಿಂದ ಪ್ರತಿ ಕಂಬಕ್ಕೆ ಪ್ಯಾನಲ್ ಜೋಡಿಸಲು ಸಮಸ್ಯೆ ಇಲ್ಲ’ ಎಂದರು.</p>.<p>ಮುಂದಿನ ದಿನಗಳಲ್ಲಿ ಸೊಣ್ಣದೇನಹಳ್ಳಿಯನ್ನು ಸೋಲಾರ್ ಗ್ರಾಮವನ್ನಾಗಿಸುವುದಾಗಿ ತಿಳಿಸಿದರು.</p>.<p>‘ಪ್ರಧಾನಮಂತ್ರಿ ಗ್ರಾಮ ವಿಕಾಸ ಯೋಜನೆಗೆ ಸೊಣ್ಣದೇನಹಳ್ಳಿಯನ್ನು ಅರಸಿಕೊಂಡಿದ್ದು ಸುಮಾರು ₹51 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತದೆ’ ಎಂದರು.</p>.<p>‘ಗ್ರಾಮದಲ್ಲಿ ಈಗಾಗಲೇ ಗುರುತಿಸಿರುವ 5 ಎಕರೆ ಜಮೀನಿನಲ್ಲಿ ಗ್ರಾಮದ ವಸತಿ ರಹಿತರಿಗೆ ನಿವೇಶನಗಳನ್ನು ನೀಡಲಾಗುತ್ತದೆ’ ಎಂದರು.</p>.<p>‘ಊರಿನಲ್ಲಿ ಈಗಾಗಲೇ ಹೆಚ್ಚಿನ ಜನರು ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ಮಾಡಿಸಿಕೊಂಡಿದ್ದು ಉಳಿಕೆಯಿರುವವರಿಗೆ ಈ ದಿನ ಕಾರ್ಡ್ಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಆರೋಗ್ಯದ ಸಮಸ್ಯೆ ಬಂದಾಗ ಸದುಪಯೋಗಪಡಿಸಿಕೊಳ್ಳಬಹುದು’ ಎಂದರು.</p>.<p>‘ಇದರಲ್ಲಿ ₹ 5 ಲಕ್ಷವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು’ ಎಂದರು.</p>.<p>ಬೆಂಗಳೂರು ಹಾಲಿನ ಡೈರಿಯ ಮಾಜಿ ಅಧ್ಯಕ್ಷ ಹುಲ್ಲೂರು ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣ ಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸಿ. ಮುನಿಯಪ್ಪ, ಮುಖಂಡರಾದ ಶ್ರೀನಿವಾಸ್, ಗಣೇಶ್, ಎಲ್ ಅಂಡ್ ಟಿ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>‘ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಗ್ರಾಮಗಳಿಗೆ ಸೋಲಾರ್ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ’ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ಅವರು ತಾಲ್ಲೂಕಿನ ದೊಡ್ಡ ಹುಲ್ಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಸೊಣ್ಣದೇನಹಳ್ಳಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.</p>.<p>‘ಗ್ರಾಮ ಪಂಚಾಯಿತಿಗಳಿಗೆ ಬರುವ ಹಣದಲ್ಲಿ ಹೆಚ್ಚಿನ ಹಣವನ್ನು ಗ್ರಾಮಗಳ ಬೀದಿ ದೀಪಗಳಿಗೆ ಹಾಗೂ ಪಂಪ್ಗಳಿಗೆ ಕೊಡಬೇಕಾಗಿರುವುದರಿಂದ ಗ್ರಾಮಗಳ ಉಳಿಕೆ ಅಭಿವೃದ್ಧಿ ಕೆಲಸ ಮಾಡಲು ಅನನುಕೂಲವಾಗುತ್ತದೆ. ಆದ್ದರಿಂದ ಸೋಲಾರ್ ದೀಪ ಅಳವಡಿಸಿದರೆ ಈ ಸಮಸ್ಯೆ ಪರಿಹಾರವಾಗುತ್ತದೆ’ ಎಂದರು.</p>.<p>‘ಈಗ ಗ್ರಾಮದ ಎಲ್ಲಾ ದೀಪಗಳಿಗೆ ಒಂದೆಡೆ ಪ್ಯಾನಲ್ಗಳನ್ನು ಜೋಡಿಸಿ ಅದರಿಂದ ಎಲ್ಲಾ ದೀಪಗಳು ಉರಿಯುವಂತೆ ಮಾಡಬಹುದಾದ್ದರಿಂದ ಪ್ರತಿ ಕಂಬಕ್ಕೆ ಪ್ಯಾನಲ್ ಜೋಡಿಸಲು ಸಮಸ್ಯೆ ಇಲ್ಲ’ ಎಂದರು.</p>.<p>ಮುಂದಿನ ದಿನಗಳಲ್ಲಿ ಸೊಣ್ಣದೇನಹಳ್ಳಿಯನ್ನು ಸೋಲಾರ್ ಗ್ರಾಮವನ್ನಾಗಿಸುವುದಾಗಿ ತಿಳಿಸಿದರು.</p>.<p>‘ಪ್ರಧಾನಮಂತ್ರಿ ಗ್ರಾಮ ವಿಕಾಸ ಯೋಜನೆಗೆ ಸೊಣ್ಣದೇನಹಳ್ಳಿಯನ್ನು ಅರಸಿಕೊಂಡಿದ್ದು ಸುಮಾರು ₹51 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತದೆ’ ಎಂದರು.</p>.<p>‘ಗ್ರಾಮದಲ್ಲಿ ಈಗಾಗಲೇ ಗುರುತಿಸಿರುವ 5 ಎಕರೆ ಜಮೀನಿನಲ್ಲಿ ಗ್ರಾಮದ ವಸತಿ ರಹಿತರಿಗೆ ನಿವೇಶನಗಳನ್ನು ನೀಡಲಾಗುತ್ತದೆ’ ಎಂದರು.</p>.<p>‘ಊರಿನಲ್ಲಿ ಈಗಾಗಲೇ ಹೆಚ್ಚಿನ ಜನರು ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ಮಾಡಿಸಿಕೊಂಡಿದ್ದು ಉಳಿಕೆಯಿರುವವರಿಗೆ ಈ ದಿನ ಕಾರ್ಡ್ಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಆರೋಗ್ಯದ ಸಮಸ್ಯೆ ಬಂದಾಗ ಸದುಪಯೋಗಪಡಿಸಿಕೊಳ್ಳಬಹುದು’ ಎಂದರು.</p>.<p>‘ಇದರಲ್ಲಿ ₹ 5 ಲಕ್ಷವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು’ ಎಂದರು.</p>.<p>ಬೆಂಗಳೂರು ಹಾಲಿನ ಡೈರಿಯ ಮಾಜಿ ಅಧ್ಯಕ್ಷ ಹುಲ್ಲೂರು ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣ ಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸಿ. ಮುನಿಯಪ್ಪ, ಮುಖಂಡರಾದ ಶ್ರೀನಿವಾಸ್, ಗಣೇಶ್, ಎಲ್ ಅಂಡ್ ಟಿ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>