ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈತ್ರಿ ಸರ್ಕಾರದಲ್ಲಿನ ಶಾಸಕರನ್ನು ಖರೀದಿಸಿ, ಅವರಿಂದ ರಾಜೀನಾಮೆ ಕೊಡಿಸಿ, ಅವರು ಅನರ್ಹರಾಗಲು ಕಾರಣವಾಗಿರುವ ಬಿಜೆಪಿ ಸರ್ಕಾರದಲ್ಲಿ ಸಚಿವರಾಗುತ್ತಿದ್ದಂತೆ ಅವರಿಗೆ ತಲೆ ನಿಲ್ಲುತ್ತಿಲ್ಲ. ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಹಾಗೂ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟೀಕಿಸುತ್ತಿರುವ ಅವರು, ತಮ್ಮ ರಾಜಕೀಯ ಹಿನ್ನೆಲೆಯನ್ನು ನೆನಪು ಮಾಡಿಕೊಳ್ಳಬೇಕು’ ಎಂದರು.