ಏ.5ರಂದು ಇದೇ ಗ್ರಾಮಕ್ಕೆ ಚಿರತೆ ನುಗ್ಗಿ ನಾಲ್ಕು ಕುರಿಗಳನ್ನು ಬಲಿ ಪಡೆದಿದ್ದ ಘಟನೆ ಮಾಸುವ ಮುನ್ನವೆ, ಭಾನುವಾರ ಒಂದೇ ದಿನ ಎರಡು ಬಾರಿ ಗ್ರಾಮಕ್ಕೆ ನುಗ್ಗಿ 5 ಮೇಕೆ, 11 ಕುರಿಗಳನ್ನು ಕಚ್ಚಿ ಹಾಕಿದೆ. ಭಾನುವಾರ ಮಧ್ಯಾಹ್ನ ಗ್ರಾಮಕ್ಕೆ ನುಗ್ಗಿರುವ ಚಿರತೆ, ಗ್ರಾಮ ನಡುವಿರುವ ಮಂಜುನಾಥರೆಡ್ಡಿ ಎಂಬುವವರ ಮನೆಗೆ ಹೊಂದಿಕೊಂಡಂತಿರುವ ಕೊಟ್ಟಿಗೆಯಲ್ಲಿದ್ದ 5 ಮೇಕೆಗಳನ್ನು ಬಲಿ ಪಡೆದು, 3 ಮೇಕೆಗಳನ್ನು ಗಾಯಗೊಳಿಸಿತ್ತು. ಈ ಕುರಿತು ವಿಷಯ ತಿಳಿದ ಅರಣ್ಯ ಅಧಿಕಾರಿ ಚೇತನ್ ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಿ ಸಿದ್ಧತೆ ನಡೆಸಲಾಗಿದೆ ಹಾಗೂ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿ ತೆರಳಿದ್ದರು.