ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರಕ್ಕೆ ಶಂಕುಸ್ಥಾಪನೆ: ವಿಶೇಷ ಪೂಜೆ

Last Updated 5 ಆಗಸ್ಟ್ 2020, 13:16 IST
ಅಕ್ಷರ ಗಾತ್ರ

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ ಪ್ರಯುಕ್ತಹೋಬಳಿಯ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ, ಕಾರ್ಯಕ್ರಮಗಳನ್ನು ಬಿಜೆಪಿ ಮುಖಂಡರು ಹಮ್ಮಿಕೊಂಡಿದ್ದರು.

ಇಲ್ಲಿನ ರಾಮಮಂದಿರ ಬೀದಿಯಲ್ಲಿರುವ ಶ್ರೀರಾಮರ ದೇವಾಲಯದಲ್ಲಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಚ.ವಿಜಯಬಾಬು, ಕನಕರಾಜು, ಬಲಮುರಿ ಶ್ರೀನಿವಾಸ್, ವೆಂಕಟೇಶ್ ಪ್ರಭು ಸೇರಿದಂತೆ ಹಲವು ಮಂದಿ ಮುಖಂಡರು ಹೋಮ ಮಾಡಿಸಿದರು.

ಬೆಳಗಿನಿಂದಲೇ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿದ ಮುಖಂಡರು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಸಮರ್ಪಣೆ ಮಾಡಿದರು.

‘ಇಲ್ಲಿನ ದೇವನಹಳ್ಳಿ ಮುಖ್ಯರಸ್ತೆಯಲ್ಲಿರುವ ಬಸಪ್ಪನ ತೋಪಿನ ಬಳಿಯಿರುವ ಆಂಜನೇಯಸ್ವಾಮಿ ದೇವಾಲಯ, ಟೋಲ್ ಗೇಟ್ ಬಳಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಶಿಡ್ಲಘಟ್ಟ ಕ್ರಾಸ್‌ನಲ್ಲಿರುವ ಆಂಜನೇಯಸ್ವಾಮಿ ದೇವಾಲಯ, ನಗರೇಶ್ವರಸ್ವಾಮಿ ದೇವಾಲಯ, ವೀರಭದ್ರಸ್ವಾಮಿ ದೇವಾಲಯ, ವೆಂಕಟರಮಣಸ್ವಾಮಿ ದೇವಾಲಯ, ಚನ್ನಕೇಶವಸ್ವಾಮಿ ದೇವಾಲಯ, ಭಟ್ರೇನಹಳ್ಳಿ ಸಾಯಿನಾಥ ಜ್ಞಾನಮಂದಿರ, ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಮಾಡಿದರು.

ಮುಖಂಡ ಬಲಮುರಿ ಶ್ರೀನಿವಾಸ್ ಮಾತನಾಡಿ, ‘ಅನೇಕ ವರ್ಷಗಳ ಹೋರಾಟದ ಫಲವಾಗಿ ಇಂದು ನಡೆಯುತ್ತಿರುವ ಶಂಕುಸ್ಥಾಪನೆ ಕಾರ್ಯಕ್ರಮ ಐತಿಹಾಸಿಕವಾದದ್ದು. ಈ ಮಂದಿರ ಸರ್ವಧರ್ಮಗಳ ಸಾಮರಸ್ಯದ ಕೇಂದ್ರವಾಗುವುದರಲ್ಲಿ ಅನುಮಾನವಿಲ್ಲ. ಯಾವುದೇ ತೊಡಕುಗಳಿಲ್ಲದೆ ಈ ದೇವಾಲಯದ ಕಾರ್ಯಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ’ ಎಂದರು.

ಹೋಬಳಿ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿನ ದೇವಾಲಯಗಳಲ್ಲೂ ಪೂಜೆ ಸಲ್ಲಿಸಿ, ಸಿಹಿ ಹಂಚಿಕೆ ಮಾಡಿದರು. ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿರುವ ಕಾರಣ ಸಂಭ್ರಮಾಚರಣೆ, ಪಟಾಕಿ ಸಿಡಿಸುವುದಕ್ಕೆ, ಮೆರವಣಿಗೆ ನಡೆಸುವುದಕ್ಕೆ ಅವಕಾಶ ನೀಡಿರಲಿಲ್ಲ. ಮುಖಂಡರಾದ ಸಾಗರ್, ಆರ್.ಎಸ್.ಎಸ್. ಲೋಕೇಶ್, ನಟರಾಜ್, ರಜನಿಕನಕರಾಜು, ದೇವರಾಜು, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT