ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಅನ್ನ ಸಂತರ್ಪಣೆ ನಡೆಯಿತು. ಗೆರಟಿಗನಬೆಲೆ ಪವಾಡ ಬಸವೇಶ್ವರ, ಬಯಲು ಬಸವೇಶ್ವರ ಸ್ವಾಮಿ, ನೆರಳೂರು ವಿಶ್ವನಾಥಸ್ವಾಮಿ, ಬಳ್ಳೂರು ಕ್ರಾಸ್ನ ಬೃಹದೀಶ್ವರ, ಪಟ್ಟಣದ ಥಳೀ ರಸ್ತೆಯ ಬಸವೇಶ್ವರ ಸ್ವಾಮಿ, ಉಮಾ ಮಹೇಶ್ವರ, ಜಲಕಂಠೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಗಳು ಶ್ರದ್ಧಾ ಭಕ್ತಿಯಿಂದ ನಡೆದವು. ಹಳೇಹಳ್ಳಿಯ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಏರ್ಪಡಿಸಲಾಗಿತ್ತು. ಹಾಲ್ದೇನಹಳ್ಳಿ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಅಭಿಷೇಕ, ವಿಶೇಷ ಪೂಜೆಗಳು ನಡೆದವು.