ಪಟ್ಟಣದ ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯ, ಬನ್ನೇರುಘಟ್ಟ ಚಂಪಕಧಾಮ ಸ್ವಾಮಿ ದೇವಾಲಯ, ಹೆಬ್ಬಗೋಡಿ ಅನಂತನಗರದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ, ಸರ್ಜಾಪುರ ಶ್ರೀರಾಮ ದೇವಾಲಯ, ಲಕ್ಷ್ಮೀಕುಂಟೆ ಆಂಜನೇಯ ಸ್ವಾಮಿ ದೇವಾಲಯ, ಸಬ್ಮಂಗಲ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಏರ್ಪಡಿಸಲಾಗಿತ್ತು.