<p><strong>ವಿಜಯಪುರ (ದೇವನಹಳ್ಳಿ)</strong>: ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಸಾಧನೆ ಮಾಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ ತಿಳಿಸಿದರು.</p>.<p>ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಪರೀಕ್ಷೆ ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಮಾತನಾಡಿದರು.</p>.<p>ಈಗಾಗಲೇ ವಿದ್ಯಾರ್ಥಿಗಳಿಗೆ ಮೂರು ಹಂತದಲ್ಲಿ ಪೂರ್ವ ಸಿದ್ಧತೆ ಪರೀಕ್ಷೆ ಏರ್ಪಡಿಸಲಾಗಿದ್ದು, ಇದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಭಯ ಹೋಗಲಾಡಿಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು, ವಿದ್ಯಾರ್ಥಿಗಳೆ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವುದರೊಂದಿಗೆ ತಮ್ಮ ಹಿಮ್ಮಾಹಿತಿ ಪಡೆಯಬಹುದು ಎಂದರು.</p>.<p>ಪರೀಕ್ಷಾ ವೆಬ್ಸೆಟ್ನಲ್ಲಿ ಪ್ರತಿ ವಿಷಯಕ್ಕೂ ನಾಲ್ಕು ಮಾದರಿಗಳ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿದ್ದು, 4,850 ಪ್ರಶ್ನೆಗಳು ಇರಲ್ಲಿದ್ದು, ಆ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಿಸುವ ಮೂಲಕ ಪರೀಕ್ಷೆಗೆಪೂರ್ವ ಸಿದ್ಧತೆ ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಕಳೆದ ಸಾಲಿನಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625ಅಂಕಕ್ಕೆ 625 ಅಂಕ ಪಡೆದಿದ್ದು, ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳು ಈ ಸಾಧನೆ ಮಾಡಬೇಕೆಂದು ಹೇಳಿದರು.</p>.<p>ಉಪ ಪ್ರಾಂಶುಪಾಲೆ ಕೋಮಲ, ಕನ್ನಡ ವಿಷಯ ಪರಿವೀಕ್ಷಕಿ ಪದ್ಮಾವತಿ, ಬಿ.ಎಸ್.ನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ)</strong>: ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಸಾಧನೆ ಮಾಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ ತಿಳಿಸಿದರು.</p>.<p>ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಪರೀಕ್ಷೆ ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಮಾತನಾಡಿದರು.</p>.<p>ಈಗಾಗಲೇ ವಿದ್ಯಾರ್ಥಿಗಳಿಗೆ ಮೂರು ಹಂತದಲ್ಲಿ ಪೂರ್ವ ಸಿದ್ಧತೆ ಪರೀಕ್ಷೆ ಏರ್ಪಡಿಸಲಾಗಿದ್ದು, ಇದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಭಯ ಹೋಗಲಾಡಿಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು, ವಿದ್ಯಾರ್ಥಿಗಳೆ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವುದರೊಂದಿಗೆ ತಮ್ಮ ಹಿಮ್ಮಾಹಿತಿ ಪಡೆಯಬಹುದು ಎಂದರು.</p>.<p>ಪರೀಕ್ಷಾ ವೆಬ್ಸೆಟ್ನಲ್ಲಿ ಪ್ರತಿ ವಿಷಯಕ್ಕೂ ನಾಲ್ಕು ಮಾದರಿಗಳ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿದ್ದು, 4,850 ಪ್ರಶ್ನೆಗಳು ಇರಲ್ಲಿದ್ದು, ಆ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಿಸುವ ಮೂಲಕ ಪರೀಕ್ಷೆಗೆಪೂರ್ವ ಸಿದ್ಧತೆ ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಕಳೆದ ಸಾಲಿನಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625ಅಂಕಕ್ಕೆ 625 ಅಂಕ ಪಡೆದಿದ್ದು, ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳು ಈ ಸಾಧನೆ ಮಾಡಬೇಕೆಂದು ಹೇಳಿದರು.</p>.<p>ಉಪ ಪ್ರಾಂಶುಪಾಲೆ ಕೋಮಲ, ಕನ್ನಡ ವಿಷಯ ಪರಿವೀಕ್ಷಕಿ ಪದ್ಮಾವತಿ, ಬಿ.ಎಸ್.ನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>