<p>ಆನೇಕಲ್:ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಅತ್ಯಂತ ಸಮರ್ಥವಾಗಿ ಬಿಂಬಿಸಿ ರಾಮಾಯಣದಂತಹ ಮೇರುಕೃತಿಯನ್ನು ವಾಲ್ಮೀಕಿ ಮಹರ್ಷಿ ರಚಿಸಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ ಎಂದು ಆನೇಕಲ್ ತಾಲ್ಲೂಕು ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜೀವನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ರಾಮಾಯಣ ಕೃತಿಯು ಸಾವಿರಾರು ವರ್ಷಗಳು ಕಳೆದರೂ ಶಾಶ್ವತವಾಗಿ ಉಳಿದಿದೆ. ಇಂತಹ ಮಹಾನ್ ಕೃತಿಯನ್ನು ರಚಿಸಿದ ವಾಲ್ಮೀಕಿ ಅವರ ಜಯಂತಿಯ ಮೂಲಕ ಅವರ ಆದರ್ಶಗಳು ಸಮಾಜದ ಭಾಗವಾಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.</p>.<p>ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಸರ್ಕಾರ ಈ ಬಗ್ಗೆ ದಿಟ್ಟ ತೀರ್ಮಾನ ಕೈಗೊಳ್ಳುವ ಮೂಲಕ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಆನೇಕಲ್ನಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಾಲ್ಮೀಕಿ ಜಯಂತಿಯನ್ನು ಎಲ್ಲಾ ಇಲಾಖೆಗಳು ಆಚರಿಸಬೇಕು ಎಂದು ಒತ್ತಾಯಿಸಿದರು.</p>.<p>ರಾಜಸ್ವ ನಿರೀಕ್ಷಕ ಆಂಜಿನಪ್ಪ, ಮುಖಂಡರಾದ ವೆಂಕಟೇಶ್, ಸೀನಪ್ಪ, ರಾಮನಾಯಕ, ಉಮೇಶ್, ಕುಮಾರ್ಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್:ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಅತ್ಯಂತ ಸಮರ್ಥವಾಗಿ ಬಿಂಬಿಸಿ ರಾಮಾಯಣದಂತಹ ಮೇರುಕೃತಿಯನ್ನು ವಾಲ್ಮೀಕಿ ಮಹರ್ಷಿ ರಚಿಸಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ ಎಂದು ಆನೇಕಲ್ ತಾಲ್ಲೂಕು ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜೀವನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ರಾಮಾಯಣ ಕೃತಿಯು ಸಾವಿರಾರು ವರ್ಷಗಳು ಕಳೆದರೂ ಶಾಶ್ವತವಾಗಿ ಉಳಿದಿದೆ. ಇಂತಹ ಮಹಾನ್ ಕೃತಿಯನ್ನು ರಚಿಸಿದ ವಾಲ್ಮೀಕಿ ಅವರ ಜಯಂತಿಯ ಮೂಲಕ ಅವರ ಆದರ್ಶಗಳು ಸಮಾಜದ ಭಾಗವಾಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.</p>.<p>ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಸರ್ಕಾರ ಈ ಬಗ್ಗೆ ದಿಟ್ಟ ತೀರ್ಮಾನ ಕೈಗೊಳ್ಳುವ ಮೂಲಕ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಆನೇಕಲ್ನಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಾಲ್ಮೀಕಿ ಜಯಂತಿಯನ್ನು ಎಲ್ಲಾ ಇಲಾಖೆಗಳು ಆಚರಿಸಬೇಕು ಎಂದು ಒತ್ತಾಯಿಸಿದರು.</p>.<p>ರಾಜಸ್ವ ನಿರೀಕ್ಷಕ ಆಂಜಿನಪ್ಪ, ಮುಖಂಡರಾದ ವೆಂಕಟೇಶ್, ಸೀನಪ್ಪ, ರಾಮನಾಯಕ, ಉಮೇಶ್, ಕುಮಾರ್ಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>