<p><strong>ವಿಜಯಪುರ: </strong>ಸಾಧನೆ ಮಾಡಲು ಏಕಾಗ್ರತೆ ಮತ್ತು ಛಲ ಅವಶ್ಯ. ಇದಕ್ಕಾಗಿ ಸಮಯ ಮೀಸಲಿಟ್ಟಾಗ ಸಾಧನೆ ಶಿಖರವೇರಲು ಸಾಧ್ಯ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ. ವೆಂಕಟೇಶ್ ಅಭಿಪ್ರಾಯಪಟ್ಟರು.</p>.<p>ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂರು ಪದಕ ಗಳಿಸಿರುವ ಡಾ.ರಮೇಶಪ್ಪ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>ಕಲಿಕೆ ಮತ್ತು ಸಾಧನೆ ಮಾಡಬೇಕೆನ್ನುವ ಹಂಬಲ ನಿರಂತರವಾದ ಪ್ರಕ್ರಿಯೆಯಾಗಿದೆ. ಅದನ್ನು ಏಕಾಗ್ರತೆಯಿಂದ ಕಾರ್ಯಗತಗೊಳಿಸಬೇಕೆಂದು ಸಲಹೆ ನೀಡಿದರು.</p>.<p>ಪ್ರತಿಯೊಬ್ಬರೂ ಶಿಕ್ಷಣ, ಕ್ರೀಡೆ, ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಕಲಾ ಚಾತುರ್ಯ ಇದ್ದರೂ ಸಂಪನ್ಮೂಲಗಳ ಕೊರತೆಯಿಂದಾಗಿ ಕಳೆದುಕೊಳ್ಳುವಂತಾಗಿದೆ ಎಂದು ವಿಷಾದಿಸಿದರು.</p>.<p>ಪ್ರಶಸ್ತಿ ವಿಜೇತ ಶಿಕ್ಷಕ ಡಾ.ರಮೇಶಪ್ಪ ಮಾತನಾಡಿ, ‘ನನ್ನ ಪರಿಶ್ರಮ ಶಾಲೆ ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎನ್ನುವ ಉದ್ದೇಶದಿಂದ ಬಿಡುವಿನ ಸಮಯವನ್ನು ಕ್ರೀಡೆಗೆ ಮೀಸಲು ಇಟ್ಟಿದ್ದೇನೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಜತೆಗೆ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಸಾಧನೆ ಮಾಡಲು ಏಕಾಗ್ರತೆ ಮತ್ತು ಛಲ ಅವಶ್ಯ. ಇದಕ್ಕಾಗಿ ಸಮಯ ಮೀಸಲಿಟ್ಟಾಗ ಸಾಧನೆ ಶಿಖರವೇರಲು ಸಾಧ್ಯ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ. ವೆಂಕಟೇಶ್ ಅಭಿಪ್ರಾಯಪಟ್ಟರು.</p>.<p>ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂರು ಪದಕ ಗಳಿಸಿರುವ ಡಾ.ರಮೇಶಪ್ಪ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>ಕಲಿಕೆ ಮತ್ತು ಸಾಧನೆ ಮಾಡಬೇಕೆನ್ನುವ ಹಂಬಲ ನಿರಂತರವಾದ ಪ್ರಕ್ರಿಯೆಯಾಗಿದೆ. ಅದನ್ನು ಏಕಾಗ್ರತೆಯಿಂದ ಕಾರ್ಯಗತಗೊಳಿಸಬೇಕೆಂದು ಸಲಹೆ ನೀಡಿದರು.</p>.<p>ಪ್ರತಿಯೊಬ್ಬರೂ ಶಿಕ್ಷಣ, ಕ್ರೀಡೆ, ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಕಲಾ ಚಾತುರ್ಯ ಇದ್ದರೂ ಸಂಪನ್ಮೂಲಗಳ ಕೊರತೆಯಿಂದಾಗಿ ಕಳೆದುಕೊಳ್ಳುವಂತಾಗಿದೆ ಎಂದು ವಿಷಾದಿಸಿದರು.</p>.<p>ಪ್ರಶಸ್ತಿ ವಿಜೇತ ಶಿಕ್ಷಕ ಡಾ.ರಮೇಶಪ್ಪ ಮಾತನಾಡಿ, ‘ನನ್ನ ಪರಿಶ್ರಮ ಶಾಲೆ ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎನ್ನುವ ಉದ್ದೇಶದಿಂದ ಬಿಡುವಿನ ಸಮಯವನ್ನು ಕ್ರೀಡೆಗೆ ಮೀಸಲು ಇಟ್ಟಿದ್ದೇನೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಜತೆಗೆ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>