<p><strong>ಆನೇಕಲ್: </strong>ಕರುನಾಡು ರೈತ ಗೋಪಾಲಕರ ಸಂಘದಿಂದ ಡಿಸೆಂಬರ್ 12, 13 ಮತ್ತು 14ರಂದು ರಾಜ್ಯಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ಪಟ್ಟಣದ ಎಎಸ್ಬಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಮುಖ್ಯಸ್ಥ ಭಾರತ ಸಾರಥಿ ಹೇಳಿದರು.</p>.<p>ಮಂಗಳವಾರ ನಡೆದ ಕರುನಾಡ ರೈತ ಗೋಪಾಲಕರ ಸಂಘದ ರಾಜ್ಯ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೊದಲ ಬಹುಮಾನ ಒಂದು ಲಕ್ಷ, ಎರಡನೇ ಬಹುಮಾನ ₹80ಸಾವಿರ, ಮೂರನೇ ಬಹುಮಾನ ₹60ಸಾವಿರ, ನಾಲ್ಕನೇ ಬಹುಮಾನ ₹40ಸಾವಿರ, ಐದನೇ ₹20ಸಾವಿರ, ಆರನೇ ಬಹುಮಾನ ₹10 ಸಾವಿರ ನಿಗದಿಪಡಿಸಲಾಗಿದೆ ಎಂದರು.</p>.<p>ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ರೈತರು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಗೋಪಾಲಕರು ಡಿಸೆಂಬರ್ 12ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಹಾಲು ಕರೆಯುವ ಯಂತ್ರಗಳನ್ನು ಉಪಯೋಗಿಸಬಾರದು ಎಂದರು.</p>.<p>ಕರುನಾಡು ರೈತ ಗೋಪಾಲಕರ ಸಂಘದ ರಾಜ್ಯಾಧ್ಯಕ್ಷರಾಗಿ ಎಸ್.ಮುನಿರಾಜು, ಉಪಾಧ್ಯಕ್ಷರಾಗಿ ವಣಕನಹಳ್ಳಿ ಮುನಿವೆಂಕಟಪ್ಪ ಗೌರವಾಧ್ಯಕ್ಷ ಕಾವಲಸಳ್ಳಿ ರಮೇಶ್ ರೆಡ್ಡಿ, ಉಪಾಧ್ಯಕ್ಷ ಮುರುಗೇಶ್, ಕಾರ್ಯಾಧ್ಯಕ್ಷ ಎಚ್.ಶ್ರೀನಿವಾಸ ರೆಡ್ಡಿ, ಖಜಾಂಚಿ ಬಿ.ವೈ.ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಟಿ.ಚೇತನ್, ನಿರ್ದೇಶಕರಾಗಿ ರಾಜಣ್ಣ, ಅಮರೇಶ್, ಭಕ್ತಿಪುರ ನಾರಾಯಣಪ್ಪ ಆಯ್ಕೆಯಾಗಿದ್ದಾರೆ.</p>.<p>ಸಂಘದ ತಾಲ್ಲೂಕು ಅಧ್ಯಕ್ಷರಾಗಿ ದಿಲೀಪ್ ಗೌಡ, ಉಪಾಧ್ಯಕ್ಷ ಮನೋಜ್, ದರ್ಶನ, ಪ್ರವೀಣ್ ಗೌಡ, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಕಾರ್ಯದರ್ಶಿ ಸಮಂದೂರು ಮಧು ಮತ್ತು ಖಜಾಂಚಿ ಗಿರೀಶ್ ಹಾಗೂ ಗೌರವಾಧ್ಯಕ್ಷರಾಗಿ ನಾಗಪ್ಪ ಆಯ್ಕೆಯಾದರು.</p>.<p>ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಕರುನಾಡು ರೈತ ಗೋಪಾಲಕರ ಸಂಘದಿಂದ ಡಿಸೆಂಬರ್ 12, 13 ಮತ್ತು 14ರಂದು ರಾಜ್ಯಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ಪಟ್ಟಣದ ಎಎಸ್ಬಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಮುಖ್ಯಸ್ಥ ಭಾರತ ಸಾರಥಿ ಹೇಳಿದರು.</p>.<p>ಮಂಗಳವಾರ ನಡೆದ ಕರುನಾಡ ರೈತ ಗೋಪಾಲಕರ ಸಂಘದ ರಾಜ್ಯ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೊದಲ ಬಹುಮಾನ ಒಂದು ಲಕ್ಷ, ಎರಡನೇ ಬಹುಮಾನ ₹80ಸಾವಿರ, ಮೂರನೇ ಬಹುಮಾನ ₹60ಸಾವಿರ, ನಾಲ್ಕನೇ ಬಹುಮಾನ ₹40ಸಾವಿರ, ಐದನೇ ₹20ಸಾವಿರ, ಆರನೇ ಬಹುಮಾನ ₹10 ಸಾವಿರ ನಿಗದಿಪಡಿಸಲಾಗಿದೆ ಎಂದರು.</p>.<p>ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ರೈತರು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಗೋಪಾಲಕರು ಡಿಸೆಂಬರ್ 12ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಹಾಲು ಕರೆಯುವ ಯಂತ್ರಗಳನ್ನು ಉಪಯೋಗಿಸಬಾರದು ಎಂದರು.</p>.<p>ಕರುನಾಡು ರೈತ ಗೋಪಾಲಕರ ಸಂಘದ ರಾಜ್ಯಾಧ್ಯಕ್ಷರಾಗಿ ಎಸ್.ಮುನಿರಾಜು, ಉಪಾಧ್ಯಕ್ಷರಾಗಿ ವಣಕನಹಳ್ಳಿ ಮುನಿವೆಂಕಟಪ್ಪ ಗೌರವಾಧ್ಯಕ್ಷ ಕಾವಲಸಳ್ಳಿ ರಮೇಶ್ ರೆಡ್ಡಿ, ಉಪಾಧ್ಯಕ್ಷ ಮುರುಗೇಶ್, ಕಾರ್ಯಾಧ್ಯಕ್ಷ ಎಚ್.ಶ್ರೀನಿವಾಸ ರೆಡ್ಡಿ, ಖಜಾಂಚಿ ಬಿ.ವೈ.ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಟಿ.ಚೇತನ್, ನಿರ್ದೇಶಕರಾಗಿ ರಾಜಣ್ಣ, ಅಮರೇಶ್, ಭಕ್ತಿಪುರ ನಾರಾಯಣಪ್ಪ ಆಯ್ಕೆಯಾಗಿದ್ದಾರೆ.</p>.<p>ಸಂಘದ ತಾಲ್ಲೂಕು ಅಧ್ಯಕ್ಷರಾಗಿ ದಿಲೀಪ್ ಗೌಡ, ಉಪಾಧ್ಯಕ್ಷ ಮನೋಜ್, ದರ್ಶನ, ಪ್ರವೀಣ್ ಗೌಡ, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಕಾರ್ಯದರ್ಶಿ ಸಮಂದೂರು ಮಧು ಮತ್ತು ಖಜಾಂಚಿ ಗಿರೀಶ್ ಹಾಗೂ ಗೌರವಾಧ್ಯಕ್ಷರಾಗಿ ನಾಗಪ್ಪ ಆಯ್ಕೆಯಾದರು.</p>.<p>ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>