<p>ಸೂಲಿಬೆಲೆ: ಪಟ್ಟಣದಿಂದ ಗಿಡ್ಡಪ್ಪನಹಳ್ಳಿ ಗ್ರಾಮಕ್ಕೆ ಹಾದು ಹೋಗುವ ರಸ್ತೆ ತುಂಬ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.</p>.<p>ಸೂಲಿಬೆಲೆ ಪಟ್ಟಣದಿಂದ ಗಿಡ್ಡಪ್ಪನಹಳ್ಳಿಗೆ ಹಾದು ಹೋಗುವ ರಾಜ್ಯ ಹೆದ್ದಾರಿ-35 ರಸ್ತೆ, ಮುಂದುವರಿದು ಹೊಸಕೋಟೆ ಕೈಗಾರಿಕ ಪ್ರದೇಶ, ಕೋಲಾರ ಹಾಗೂ ಮಾಲೂರು ಸೇರಿದಂತೆ ಅನೇಕ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಲವು ವಾಹನಗಳು ಈ ರಸ್ತೆಯಲ್ಲಿ ದಿನ ನಿತ್ಯ ಸಂಚರಿಸುತ್ತವೆ. ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆ ಹಲವು ವರ್ಷಗಳಿಂದ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಣದಿರುವುದರಿಂದ ರಸ್ತೆ ತುಂಬ ಗುಂಡಿಗಳು ಬಿದ್ದಿವೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಸೂಲಿಬೆಲೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><strong>ನಾಮಫಲಕ ಖಾಸಗಿ ಬಳಕೆ:</strong> ರಾಜ್ಯ ಹೆದ್ದಾರಿ 35 ರ ಅಭಿವೃದ್ಧಿ ಯೋಜನೆಯ ವಿವರವನ್ನೊಳಗೊಂಡ ನಾಮಫಲಕದಲ್ಲಿ ಸ್ಥಳೀಯರೊಬ್ಬರು ತಮ್ಮ ಹೋಟೆಲ್ ಹೆಸರು ಮತ್ತು ವಿಳಾಸವನ್ನು ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೂಲಿಬೆಲೆ: ಪಟ್ಟಣದಿಂದ ಗಿಡ್ಡಪ್ಪನಹಳ್ಳಿ ಗ್ರಾಮಕ್ಕೆ ಹಾದು ಹೋಗುವ ರಸ್ತೆ ತುಂಬ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.</p>.<p>ಸೂಲಿಬೆಲೆ ಪಟ್ಟಣದಿಂದ ಗಿಡ್ಡಪ್ಪನಹಳ್ಳಿಗೆ ಹಾದು ಹೋಗುವ ರಾಜ್ಯ ಹೆದ್ದಾರಿ-35 ರಸ್ತೆ, ಮುಂದುವರಿದು ಹೊಸಕೋಟೆ ಕೈಗಾರಿಕ ಪ್ರದೇಶ, ಕೋಲಾರ ಹಾಗೂ ಮಾಲೂರು ಸೇರಿದಂತೆ ಅನೇಕ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಲವು ವಾಹನಗಳು ಈ ರಸ್ತೆಯಲ್ಲಿ ದಿನ ನಿತ್ಯ ಸಂಚರಿಸುತ್ತವೆ. ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆ ಹಲವು ವರ್ಷಗಳಿಂದ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಣದಿರುವುದರಿಂದ ರಸ್ತೆ ತುಂಬ ಗುಂಡಿಗಳು ಬಿದ್ದಿವೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಸೂಲಿಬೆಲೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p><strong>ನಾಮಫಲಕ ಖಾಸಗಿ ಬಳಕೆ:</strong> ರಾಜ್ಯ ಹೆದ್ದಾರಿ 35 ರ ಅಭಿವೃದ್ಧಿ ಯೋಜನೆಯ ವಿವರವನ್ನೊಳಗೊಂಡ ನಾಮಫಲಕದಲ್ಲಿ ಸ್ಥಳೀಯರೊಬ್ಬರು ತಮ್ಮ ಹೋಟೆಲ್ ಹೆಸರು ಮತ್ತು ವಿಳಾಸವನ್ನು ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>