ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷುಲ್ಲಕ ಕಾರಣಕ್ಕೆ ದೊಣ್ಣೆಗಳಿಂದ ಬಡಿದಾಟ: ವಿಡಿಯೊ ವೈರಲ್‌

Last Updated 27 ನವೆಂಬರ್ 2020, 6:24 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಗುಂಡಮಗೆರೆ ಗ್ರಾಮದಲ್ಲಿ ಬುಧವಾರ ಮನೆ ಮುಂದಿನ ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ದೊಣ್ಣೆಗಳಿಂದ ಬಡಿದಾಡಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ.

ಸಿದ್ದಮ್ಮ ಮತ್ತು ಗಂಗಾಧರ್ ಕುಟುಂಬದ ನಡುವೆ ಚರಂಡಿ ನೀರು ಹರಿದು ಹೋಗುವ ವಿಚಾರಕ್ಕೆ ಜಗಳ ನಡೆದಿದೆ. ಸಿದ್ದಮ್ಮ ಹಾಗೂ ಅವರ ಪುತ್ರ ಅಶ್ವಥ್ ಅವರಿಗೆ ಗಂಭೀರ ಗಾಯಗಳಾಗಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡು ಕುಟುಂಬದ ಪುರುಷರು, ಮಹಿಳೆಯರು ಬಡಿದಾಟದ ಸಂದರ್ಭದಲ್ಲಿ ಒಬ್ಬ ಯುವಕ ಮನೆಯಲ್ಲಿನ ಬಂದೂಕು ತಂದು ಎದುರಿಸುವ ದೃಶ್ಯವೂ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಜಾತಿ ಬಣ್ಣ ಬಳಿದು ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳಿಸಲಾಗುತ್ತಿದೆ.

ಈ ಘಟನೆ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಗಂಗಾಧರ್, ಅಂಬಿಕಾ, ಹರೀಶ್‌ಬಾಬು ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT