ಈ ಬಗ್ಗೆ ಮಾಹಿತಿ ನೀಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಮೂರು ಸ್ಥಳಗಳಲ್ಲಿ, ದೇವನಹಳ್ಳಿ ತಾಲ್ಲೂಕಿನಲ್ಲಿ 11 ಸ್ಥಳಗಳಲ್ಲಿ ಮಾತ್ರ ಅಧಿಕೃತವಾಗಿ ಕಲ್ಲುಗಣಿಗಾರಿಕೆ ನಡೆಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ನೀಡಿದೆ. ಇಲ್ಲಿನ ಕಲ್ಲು ಗಣಿಯಲ್ಲಿ ಮನೆ ಕಟ್ಟಡ, ರಸ್ತೆಗಳ ನಿರ್ಮಾಣಕ್ಕೆ ಅಗತ್ಯ ಇರುವ ಎಂಸ್ಯಾಂಡ್ ಹಾಗೂ ಜಲ್ಲಿ ಕಲ್ಲು ಮಾಡಲಾಗುತ್ತಿದೆ. ಭೂಮಿಯಿಂದ ಕಲ್ಲು ತೆಗೆಯಲು ಸಂದರ್ಭದಲ್ಲಿ ಭಾರಿ ಶಬ್ಧ ಹಾಗೂ ಕಲ್ಲು ತೆಗೆಯುವ ಸುತ್ತಮುತ್ತಲಿನ ಗ್ರಾಮಗಳ ಮನೆಗಳಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಎಚ್ಚರ ವಹಿಸಬೇಕಿದೆ. ಕಲ್ಲಿನ ಸ್ಫೋಟಕ್ಕೆ ಬಳಸುವ ವಸ್ತುಗಳನ್ನು ಅಧಿಕೃತ ಪರವಾನಗಿದಾರರಿಂದಲೇ ಖರೀದಿಸು
ವಂತೆಯೂ ಸೂಚನೆ ನೀಡಲಾಗಿದೆ ಎಂದರು.