ವಿಜಯಪುರ: ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ನಗರದ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ಸಮೀಪದಲ್ಲಿ ಮರ ಬಿದ್ದುಮನೆಗೆ ಹಾನಿಯಾಗಿದೆ.
ಸಂಜೆ 6 ಗಂಟೆಗೆ ಆರಂಭವಾದ ಮಳೆ ಹಾಗೂ ಬಿರುಗಾಳಿಗೆ ವಿದ್ಯುತ್ ಕಂಬಗಳು ಮುರಿದಿವೆ. ಇಡೀ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು. ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದ್ದರಿಂದ ಜನರು ಸಂಚಾರಕ್ಕೆ ಪರದಾಡುವಂತಾಗಿತ್ತು.
ಚರಂಡಿಗಳಲ್ಲಿ ಕಸ ತುಂಬಿಕೊಂಡಿದ್ದರಿಂದ ನೀರು ರಸ್ತೆ ಮೇಲೆ ಹರಿದು, ಕೆಲ ಮನೆಗಳಿಗೂ ನುಗ್ಗಿದ್ದರಿಂದ ಜನರು ಪರದಾಡುವಂತಾಗಿತ್ತು.