<p>ಪ್ರಜಾವಾಣಿ ವಾರ್ತೆ</p>.<p><strong>ದೊಡ್ಡಬಳ್ಳಾಪುರ: </strong>ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ನಿಯಂತ್ರಣ ಇಲ್ಲದೆ ಸಾರ್ವಜನಿಕರು ಆತಂಕದಲ್ಲಿ ಓಡಾಡುವಂತಾಗಿದೆ.</p>.<p>ನಗರದ ಇಸ್ಲಾಂಪುರ, ಬಸ್ ನಿಲ್ದಾಣದ ಸುತ್ತಮುತ್ತ, ಮುತ್ಯಾಲಮ್ಮಗುಡಿ ರಸ್ತೆ, ಎಪಿಎಂಸಿ ಮಾರುಕಟ್ಟೆ ಪ್ರದೇಶ, ತೇರಿನಬೀದಿ, ರೈಲ್ವೆ ನಿಲ್ದಾಣದ ಸುತ್ತಲಿನ ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ.</p>.<p>ನಗರಸಭೆಯೊಂದಿಗೆ ನಗರದ ಒಂದು ಭಾಗವೇ ಆಗಿರುವ ದರ್ಗಾಜೋಗಹಳ್ಳಿ, ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗಳು ಸಹ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು. ಇಲ್ಲವಾದರೆ ನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣ ಕಷ್ಟವಾಗಲಿದೆ ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.</p>.<p>‘ನಗರಸಭೆಯಿಂದ ಇತ್ತೀಚೆಗೆ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ನಡೆಸಿಲ್ಲ. ಹಲವಾರು ಕಾನೂನಿಗಳ ಅಡ್ಡಿಯಿಂದಾಗಿ ನಾಯಿಗಳನ್ನು ಇಡಿದು ಬೇರೆಡೆಗೆ ಬಿಡುವಂತೆಯೂ ಇಲ್ಲ. ಈ ಎಲ್ಲಾ ಕಾರಣಗಳಿಂದ ನಗರದ ಮಾಂಸ ಮಾರಾಟ ಮಾಡುವ ಪ್ರದೇಶಗಳಲ್ಲಿ ರಾತ್ರಿ ವೇಳೆ ಇರಲಿ ಹಗಲಿನಲ್ಲೇ ಮಕ್ಕಳು, ವೃದ್ಧರು ಆತಂಕದಲ್ಲೇ ಒಡಾಡುವಂತಾಗಿದೆ’ ಎನ್ನುತ್ತಾರೆ ಇಸ್ಲಾಂಪುರ ನಿವಾಸಿ ಮಂಜುಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ದೊಡ್ಡಬಳ್ಳಾಪುರ: </strong>ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ನಿಯಂತ್ರಣ ಇಲ್ಲದೆ ಸಾರ್ವಜನಿಕರು ಆತಂಕದಲ್ಲಿ ಓಡಾಡುವಂತಾಗಿದೆ.</p>.<p>ನಗರದ ಇಸ್ಲಾಂಪುರ, ಬಸ್ ನಿಲ್ದಾಣದ ಸುತ್ತಮುತ್ತ, ಮುತ್ಯಾಲಮ್ಮಗುಡಿ ರಸ್ತೆ, ಎಪಿಎಂಸಿ ಮಾರುಕಟ್ಟೆ ಪ್ರದೇಶ, ತೇರಿನಬೀದಿ, ರೈಲ್ವೆ ನಿಲ್ದಾಣದ ಸುತ್ತಲಿನ ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ.</p>.<p>ನಗರಸಭೆಯೊಂದಿಗೆ ನಗರದ ಒಂದು ಭಾಗವೇ ಆಗಿರುವ ದರ್ಗಾಜೋಗಹಳ್ಳಿ, ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗಳು ಸಹ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು. ಇಲ್ಲವಾದರೆ ನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣ ಕಷ್ಟವಾಗಲಿದೆ ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.</p>.<p>‘ನಗರಸಭೆಯಿಂದ ಇತ್ತೀಚೆಗೆ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ನಡೆಸಿಲ್ಲ. ಹಲವಾರು ಕಾನೂನಿಗಳ ಅಡ್ಡಿಯಿಂದಾಗಿ ನಾಯಿಗಳನ್ನು ಇಡಿದು ಬೇರೆಡೆಗೆ ಬಿಡುವಂತೆಯೂ ಇಲ್ಲ. ಈ ಎಲ್ಲಾ ಕಾರಣಗಳಿಂದ ನಗರದ ಮಾಂಸ ಮಾರಾಟ ಮಾಡುವ ಪ್ರದೇಶಗಳಲ್ಲಿ ರಾತ್ರಿ ವೇಳೆ ಇರಲಿ ಹಗಲಿನಲ್ಲೇ ಮಕ್ಕಳು, ವೃದ್ಧರು ಆತಂಕದಲ್ಲೇ ಒಡಾಡುವಂತಾಗಿದೆ’ ಎನ್ನುತ್ತಾರೆ ಇಸ್ಲಾಂಪುರ ನಿವಾಸಿ ಮಂಜುಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>