ಅರಣ್ಯಗಳನ್ನು ಸ್ವಾರ್ಥಕ್ಕಾಗಿ ಮನುಷ್ಯ ನಾಶಪಡಿಸುತ್ತಿದ್ದು, ಜಗತ್ತಿನಲ್ಲಿ ನಡೆಯುತ್ತಿರುವ ಅನೇಕ ವೈಪರೀತ್ಯಗಳಿಗೆ ಕಾರಣವಾಗುತ್ತಿದೆ. ಪರಿಸರದ ಸಮತೋಲನಕ್ಕೆ ಅರಣ್ಯಗಳ ಕೊಡುಗೆ ಅಪಾರವಾಗಿದೆ. ಆದರೆ, ಇಂದಿನ ದಿನಗಳಲ್ಲಿ ಗಿಡ ಮರಗಳನ್ನು ಬೇರೆ ಬೇರೆ ಕಾರಣಕ್ಕಾಗಿ ನಾಶ ಮಾಡಲಾಗುತ್ತಿದೆ. ಅದು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತಿದೆ ಎಂದು ತಿಳಿಸಿದರು.