ಜಿಲ್ಲೆಯಲ್ಲಿನ ಉತ್ತಮ ಬಿ.ಎಲ್.ಓ ಮತ್ತು ಇ.ಎಲ್.ಸಿ ಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ರಾಜ್ಯ ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ, ತೃತೀಯ ಸ್ಥಾನ ಪಡೆದ ಲಾವಣ್ಯ, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೃತಿಕ್ ಅವರನ್ನು ಅಭಿನಂದಿಸಲಾಯಿತು.